ಮತದಾರರ ಗುರುತಿನ ಚೀಟಿ ಮಾದರಿಯಲ್ಲಿ ಮದುವೆ ಆಮಂತ್ರಣ
ಧಾರವಾಡ 16: ಭಾರತ ಚುನವಣಾ ಆಯೋಗದಿಂದ ನೀಡುವ ಮತದಾರರ ಗುರುತಿನ ಚೀಟಿಯನ್ನು ಹೋಲುವಂತೆ ರಚಿಸಿರುವ ಮದುವೆ ಆಮಂತ್ರಣ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರ ಗಮನ ಸೆಳೆದಿದೆ.
ಬೆಸ್ಕಾಂ ನೌಕರರಾಗಿರುವ ಮಂಜುನಾಥ ಈರಪ್ಪ ಹೂಗಾರ ಹಾಗೂ ಹೆಸ್ಕಾಂನ ಇಂಜಿನೀಯರ್ ಆಗಿರುವ ಮಹೇಶ್ ಹೂಗಾರ ಅವರು ತಮ್ಮ ಸಹೋದರಿ ಅನ್ನಪೂರ್ಣಳ ಮದುವೆಯನ್ನು ಇದೇ ಎ.26 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದಾರೆ. ಮದುವೆ ಸಂದರ್ಭದಲ್ಲಿಯೇ ಚುನಾವಣೆಯು ನಡೆಯುತ್ತಿರುವುದರಿಂದ ಅಮಂತ್ರಣ ಪತ್ರಿಕೆಯು ಮತದಾರರಲ್ಲಿ ಜಾಗೃತಿಯನ್ನೂ ಮೂಡಿಸುವಂತಿರಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ವಿಭಿನ್ನವಾಗಿ ಮುದ್ರಿಸಿ ವಿತರಿಸುತ್ತಿದ್ದಾರೆ.
ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಬಹುತೇಕ ಜನರು ತಮ್ಮ ಹಕ್ಕು ಚಲಾಯಿಸದೇ ಮತದಾನವನ್ನು ತಪ್ಪಿಸಿ ರಜೆ ಕಳೆಯಲು ಪ್ರವಾಸಕ್ಕೆ ತೆರಳುವುದನ್ನು ಹಿಂದಿನ ಚುನಾವಣೆಗಳಲ್ಲಿ ಗಮನಿಸಿ, ತಮ್ಮಿಂದ ಸಾಧ್ಯವಾದಷ್ಟು ಜನರಿಗೆ ತಿಳುವಳಿಕೆ ಮೂಡಿಸುವ ಪ್ರಯತ್ನವಾಗಿ ಈ ಕಾರ್ಯ ಮಾಡಿದ್ದೇವೆ ಎಂದು ನರಗುಂದದ ಹೂಗಾರ ಕುಟುಂಬದ ಸದಸ್ಯರು ಹೆಮ್ಮೆಯಿಂದ ಹೇಳುತ್ತಾರೆ. ಆಮಂತ್ರಣ ಪತ್ರಿಕೆಯಲ್ಲಿ ರಕ್ತದಾನ ಮತ್ತು ಮತದಾನದ ಮಹತ್ವ ಸಾರುವ ಸಂದೇಶಗಳನ್ನು ಮುದ್ರಿಸಲಾಗಿದೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 