ಸಾಮೂಹಿಕ ಅಷ್ಟಲಕ್ಷಿ-್ಮ ಪೂಜೆ
Mass Ashtalakshi puja
ಸಾಮೂಹಿಕ ಅಷ್ಟಲಕ್ಷಿ-್ಮ ಪೂಜೆ
ಧಾರವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಸಾಮೂಹಿಕ ಶ್ರೀ ಅಷ್ಟಲಕ್ಷಿ-್ಮ ಪೂಜಾ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮದಿಹಾಳದ ಜೋಶಿ ಮಂಗಳ ಕಾರ್ಯಾಲಯದಲ್ಲಿ ಸಾಮೂಹಿಕ ಶ್ರೀ ಅಷ್ಟಲಕ್ಷಿ-್ಮ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಸಿ ಉದ್ಘಾಟಿಸಿದ ಅಮ್ಮಿನಭಾವಿ ಪಂಚಗೃಹ ಹಿರೇಮಠದ ಶ್ರೀ ಅಭಿನವ ಶಾಂತಲಿಂಗ ಶಿವಚಾರ್ಯ ಸ್ವಾಮೀಜಿ,
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯದಲ್ಲಿನ ಆರ್ಥಿಕ ಶಕ್ತಿ ಮತ್ತು ಸಂಸೃತಿಯನ್ನು ಬೆಳೆಸುವ ಕಾರ್ಯಕ್ರಮವಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಾಜಿ ಶಾಸಕ ಅಮೃತ್ ದೇಸಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮೂಲಕ ಸಮುದಾಯದಲ್ಲಿನ ಕುಟುಂಬಗಳ ಆರ್ಥಿಕ ಅಭಿವೃದ್ಧಿಯನ್ನು ಆದ್ಯತೆಯಾಗಿ ಮಾಡಿಕೊಂಡು ಬಂದಿದೆ.
ಯೋಜನೆಯ ಎಲ್ಲ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ಜರುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಅರ್ಕಚಾರ ಅಧ್ಯಕ್ಷತೆವಹಿಸಿದ್ದರು. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ, ರುಕ್ಕಯಾ ತಮಟಗಾರ, ರೂಪಾ ಪಾಲನಕರ, ವಿನಯಕುಮಾರ ಬಲೋಗಿ, ಸಾವಿತ್ರಿ ಬೆಳ್ಳಕ್ಕಿ, ಸವಿತಾ ಶಿಂಧೆ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಅಶೋಕ.ಕೆ ಸ್ವಾಗತಿಸಿದರು. ಹಿರೇಮಠ ನಿರೂಪಿಸಿದರು, ವನಿತಾ ವಂದಿಸಿದರು.ಸೇವಾಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು,ಪದಾಧಿಕಾರಿಗಳು,ವಿವಿಧ ಸಂಘಗಳ ಸದಸ್ಯರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 