ಸಾಮೂಹಿಕ ಅಷ್ಟಲಕ್ಷಿ-್ಮ ಪೂಜೆ
Mass Ashtalakshi puja
ಸಾಮೂಹಿಕ ಅಷ್ಟಲಕ್ಷಿ-್ಮ ಪೂಜೆ
ಧಾರವಾಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಸಾಮೂಹಿಕ ಶ್ರೀ ಅಷ್ಟಲಕ್ಷಿ-್ಮ ಪೂಜಾ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮದಿಹಾಳದ ಜೋಶಿ ಮಂಗಳ ಕಾರ್ಯಾಲಯದಲ್ಲಿ ಸಾಮೂಹಿಕ ಶ್ರೀ ಅಷ್ಟಲಕ್ಷಿ-್ಮ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಸಿ ಉದ್ಘಾಟಿಸಿದ ಅಮ್ಮಿನಭಾವಿ ಪಂಚಗೃಹ ಹಿರೇಮಠದ ಶ್ರೀ ಅಭಿನವ ಶಾಂತಲಿಂಗ ಶಿವಚಾರ್ಯ ಸ್ವಾಮೀಜಿ,
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯದಲ್ಲಿನ ಆರ್ಥಿಕ ಶಕ್ತಿ ಮತ್ತು ಸಂಸೃತಿಯನ್ನು ಬೆಳೆಸುವ ಕಾರ್ಯಕ್ರಮವಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಾಜಿ ಶಾಸಕ ಅಮೃತ್ ದೇಸಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮೂಲಕ ಸಮುದಾಯದಲ್ಲಿನ ಕುಟುಂಬಗಳ ಆರ್ಥಿಕ ಅಭಿವೃದ್ಧಿಯನ್ನು ಆದ್ಯತೆಯಾಗಿ ಮಾಡಿಕೊಂಡು ಬಂದಿದೆ.
ಯೋಜನೆಯ ಎಲ್ಲ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ಜರುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಅರ್ಕಚಾರ ಅಧ್ಯಕ್ಷತೆವಹಿಸಿದ್ದರು. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ, ರುಕ್ಕಯಾ ತಮಟಗಾರ, ರೂಪಾ ಪಾಲನಕರ, ವಿನಯಕುಮಾರ ಬಲೋಗಿ, ಸಾವಿತ್ರಿ ಬೆಳ್ಳಕ್ಕಿ, ಸವಿತಾ ಶಿಂಧೆ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಅಶೋಕ.ಕೆ ಸ್ವಾಗತಿಸಿದರು. ಹಿರೇಮಠ ನಿರೂಪಿಸಿದರು, ವನಿತಾ ವಂದಿಸಿದರು.ಸೇವಾಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು,ಪದಾಧಿಕಾರಿಗಳು,ವಿವಿಧ ಸಂಘಗಳ ಸದಸ್ಯರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 