ಜನಾಕರ್ಷಿಸಿದ ಶೋಭಾ ಯಾತ್ರೆ ಮೆರವಣಿಗೆ
ಲೋಕದರ್ಶನವರದಿ
ರಾಣೇಬೆನ್ನೂರು21: ಗಣೇಶೋತ್ಸವದ ಅಂಗವಾಗಿ ಇಲ್ಲಿನ ಸಂಗಮ ವೃತ್ತದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂತರ್ಿ ವಿಸರ್ಜನೆ ಶೋಭಾಯಾತ್ರೆಯ ಮೆರವಣಿಗೆಯು ಶುಕ್ರವಾರ ರಾತ್ರಿಭಕ್ತ ಸಾಗರದ ಮಧ್ಯ ಅದ್ದೂರಿಯಾಗಿ ನೆರವೇರಿತು.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಮಹಿಳೆಯರು ಅಂಗಳಕ್ಕೆ ನೀರು ಹಾಕಿ ರಂಗೋಲಿ ಬಿಡಿಸಿಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿದರು. ಜೈ ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಸಿಂಗಾಪುರದ ದುರ್ಗದ ಸಿರಿ ಸಾಂಸ್ಕೃತಿಕ ಜನಪದ ಕಲಾ ಸಂಘ ಜಾಂಜಮೇಳ, ದಾವಣಗೆರೆ ನಾಸಿಕ್ ಡೋಲ್ ಹಾಗೂ ವಿವಿಧ ಪ್ರಾಣಿಗಳ ಮುಖವಾಡ ಧರಿಸಿದ ಸ್ಥಬ್ದ ಗೊಂಬೆಗಳು ಮೆರವಣಿಗೆಯಲ್ಲಿ ಮೆರಗು ನೀಡಿದವು.
ಮೆರವಣಿಗೆಯು ಸಂಗಮ ವೃತ್ತದಿಂದ ಪ್ರಾರಂಭವಾಗಿ ರಂಗನಾಥ ನಗರದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.
ಸಹಸ್ರಾರು ಯುವಕರು ಡಿಜೆ ಹಾಡಿಗೆ ಹೆಜ್ಜೆ ಹಾಕುತ್ತಾ ಕುಣಿದು ಕುಪ್ಪಳಿಸಿದರು. ಮೆರವಣಿಗೆಯು ಮಧ್ಯರಾತ್ರಿಯವರೆಗೂ ಸಾಗಿತು. ಡಿವೈಎಸ್ಪಿ ಟಿ.ವಿ.ಸುರೇಶ ನೇತೃತ್ವದಲ್ಲಿ ಮುಂಜಾಗೃತಾ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 