ಆಗಸ್ಟ್ 5ರಂದು ಗದಗದಲ್ಲಿ ರೈತರ ಬೃಹತ್ ಪ್ರತಿಭಟನೆ
Massive farmers' protest in Gadag on August 5
ಗದಗ, ಆ. 3: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕದ ನೇತೃತ್ವದಲ್ಲಿ ಆಗಸ್ಟ್ 5ರಂದು ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮುಖಂಡ ಜಗದೀಶ ಮಳಣ್ಣ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ರೈತರು ಭಾಗವಹಿಸಲಿದ್ದು, 500 ಟ್ರ್ಯಕ್ಟರ್ಗಳೊಂದಿಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.
ರೈತರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರತಿಭಟನೆ ಆಯೋಜಿಸಲಾಗಿದ್ದು, ಹಲವಾರು ಕನ್ನಡಪರ ಹಾಗೂ ರೈತಪರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.
ಪ್ರತಿಭಟನೆಗೆ ನಂದಿವೇರಿ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿ, ವಿರಕ್ತಮಠದ ಪೂಜ್ಯ ಶ್ರೀ ಶಾಂತಲಿಂಗ ಮಹಾಸ್ವಾಮೀಜಿ, ವೇ.ಮೂ. ಗಂಗಾಧರಯ್ಯ ಜಿ. ಹಿರೇಮಠ ಹಾಗೂ ಪೂಜ್ಯ ಶ್ರೀ ಫಕ್ಕೀರಯ್ಯ ಹಿರೇಮಠ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಸವರಾಜ ಸಾಬಳೆ, ಪ್ರಕಾಶ ಮುಧೋಳ, ಸಂಗಮೇಶ ಪವಾಡಶೆಟ್ಟರ್, ವಿಜಯಕುಮಾರ ಸುಂಕದ, ಹುಚ್ಚೀರ್ಪ ಬಡಿಗೇರ, ವೀರ್ಪ ಕಾಳಗಿ, ಪರ್ಪ ಕಡಗಲ್ಲ, ಶರಣಪ್ಪ ಮಾಯಗೇರಿ, ಮುತ್ತಪ್ಪ ಜಗ್ಗಲ್, ಯಲ್ಲಪ್ಪ ಗುರಿಕಾರ, ಗುರುಲಿಂಗಪ್ಪ ತಿಪ್ಪಶೆಟ್ಟಿ, ಮುತ್ತಣ್ಣಗೌಡ ಚೌಡರಡ್ಡಿ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 