ನೇಹಾ ಹಂತಕನನ್ನು ಗಲ್ಲಿಗೇರಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ 22: ಹುಬ್ಬಳ್ಳಿಯ ಬಿಸಿಎ ಪದವಿಧರೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಖಂಡಿಸಿ ಪಟ್ಟಣದ ಜಂಗಮ ಸಮಾಜದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮತ್ತು ಸಮಾಜಗಳ ನೇತೃತ್ವದಲ್ಲಿ ಕೊಲೆ ಮಾಡಿದ ಆರೋಪಿ ಫಯಾಜನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಪಟ್ಟಣದ ಹಳೆಯ ಕಾಯಿಪಲ್ಲೆ ಮಾರುಕಟ್ಟೆಯಲ್ಲಿರುವ ಖಾಸ್ಗತೇಶ್ವರ ಮಠದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಹುಡ್ಕೋ ಬಡಾವಣೆಯಲ್ಲಿರುವ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ ಬಸವರಾಜ ನಾಗರಾಳ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 

ದಲಿತ ಮುಖಂಡ ಹರೀಶ ನಾಟಿಕಾರ ಹಾಗೂ ಜಂಗಮ ಸಮಾಜದ ಮುಖಂಡ ದಾನಯ್ಯ ಹಿರೇಮಠ, ವೈ ಎಚ್ ವಿಜಯಕರ ಕಾಮರಾಜ ಬಿರಾದಾರ ಅವರು ಮಾತನಾಡಿ ಕುಮಾರಿ ನೇಹಾ ಹಿರೇಮಠ ಅವರ ಕೋಲೆಗಿಡಾಗಿದ್ದೂ ಇಡಿ ಮಾನವಕುಲವೇ ತಲೆ ತಗ್ಗಿಸುವಂತಾಗಿದೆ.  ಜೊತೆಗೆ ದೇಶದಲ್ಲಿ ಮಹಿಳೆಯರಿಗೆ ಭದ್ರತೆಯಿಲ್ಲದಂತಾಗಿದೆ ಈ ನಿಟ್ಟಿನಲ್ಲಿ ಸರಕಾರ ಯಾವೂದೇ ಇರಲಿ ಮಾನವಿಯ ಮೌಲ್ಯಗಳ ಅಡಿಯಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸುವಂತಾಗಬೇಕು. ಈ ಘಟನೆಗೆ ಕಾರಣನಾದ ಆರೋಪಿ ಫಯಾಜನ್ನು ಗಲ್ಲಿಗೆರಿಸುವ ಮೂಲಕ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದೆಲ್ಲೆಡೆ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಬಿಗಿಗೊಳಿಸುವ ಮೂಲಕ ಎಚ್ಚರಿಕೆ ಸಂದೇಶ ನೀಡಬೇಕು ಎಂದು ಆಕ್ರೋಶ ಹೊರಹಾಕಿದರು. 

ಜಂಗಮ ಸಮಾಜದ ಅಧ್ಯಕ್ಷ ಸಿದ್ದಯ್ಯ ಕಲ್ಯಾಣಮಠ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಂ. ಬಿ. ನಾವದಗಿ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ವಿಜಯ ಮಹಾಂತೇಶ ಸಾಲಿಮಠ ವಕೀಲರು, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಸಿದ್ದರಾಜ ಹೊಳಿ, ಮಹೆಬೂಬ್ ಗೊಳಸಂಗಿ, ಸಂಗಯ್ಯ ಶಾಸ್ತ್ರಿಗಳು, ಎಚ್‌.ಆರ್‌.ಬಾಗವಾನ, ಬಸವರಾಜ ಸಿದ್ದಾಪುರ, ವೈ. ಎಚ್‌. ವಿಜಯಕರ ಸಂಗಪ್ಪ ಮೇಲಿನಮನಿ, ಸದಾಶಿವ ಮಠ, ಶಿವಾನಂದ ಹಿರೇಮಠ, ಹುಸೇನ ಮುಲ್ಲಾ, ಮಹಾಂತೇಶ ಬೂದಿಹಾಳಮಠ, ಮುತ್ತಯ್ಯಾ ಹಿರೇಮಠ ಸೇರಿದಂತೆ ಮತ್ತಿತರರು ಇದ್ದರು.