ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ದಿಂದ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ
Massive protest in Koppal by the Agricultural and Rural Workers' Association
ಕೊಪ್ಪಳ 16: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಮತ್ತು ಉದ್ಯೋಗ ಖಾತ್ರಿಗೆ ನೀಡಬೇಕಾದ ಕೂಲಿ ಮೊತ್ತವನ್ನು ಕಡಿಮೆ ಮಾಡಿರುವುದನ್ನು ಖಂಡಿಸಿ-100 ದಿನಗಳ ಬದಲಾಗಿ -200 ದಿನಕ್ಕೆ ಕೆಲಸದ ದಿನಗಳನ್ನು ಹೆಚ್ಚಿಸಲು ಕೂಲಿಯನ್ನು -600 ಗಳಿಗೆ ಹೆಚ್ಚಳ ಮಾಡಬೇಕು. ಉದ್ಯೋಗ ಖಾತ್ರಿಯನ್ನು ಕೆವೈಸಿ ಹೆಸರಿನಲ್ಲಿ ದುರ್ಬಲಗೊಳಿಸುವುದನ್ನು ಕೈ ಬಿಡಲು ಒತ್ತಾಯಿಸಿ ಎಂಜಿ ನರೇಗಾ ವನ್ನು ಬಾಪು ಯೋಜನೆ ಎಂದು ಮರುನಾಮಕರಣ ಮಾಡುವುದು ವಂಚನೆ ಯಾಗಿದೆ ಎಂದು ಆರೋಪಿಸಿದೆನಿಜವಾದ ಅಗತ್ಯವೆಂದರೆ ಬಲಪಡಿಸುವುದು. ಎಂದು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ಕೊಪ್ಪಳ. ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಹತ್ತಿರ ಕನಕದಾಸ ವೃತ್ತ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಹೊರಡಿಸಿರುವ ಆದೇಶ ಪ್ರತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಬಸವರಾಜ ಮರಕುಂಬಿ. ಜಿಲ್ಲಾ ಕಾರ್ಯದರ್ಶಿ ಸುಂಕಪ್ಪ ಗದಗ್. ಮುಖಂಡರು. ರಾಮಣ್ಣ ದೊಡ್ಡಮನಿ ಹುಸೇನ್ ಸಾಬ ನದಾಫ್ ಕಾಲೇಸಾಬ ಕರಡಿ ಗಂಗಪ್ಪ ಕೊರ್ವರ್ ಹನುಮಂತ ಪಡಚಿಂತಿ ಫಕೀರಮ್ಮ ಮಿರಗನತಂಡಿ ಶಾಂತಮ್ಮ ಬೆಂಗಳೂರಮನಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 