ಕಡಲೆ ಬೆಳೆಯಲ್ಲಿ ಸೊರಗು ರೋಗ ನಿರ್ವಹಣೆಗೆ ರೈತರು ಅನುಸರಿಸಬೇಕಾದ ಕ್ರಮಗಳು
Measures to be followed by farmers to manage rust disease in chickpea crop
ಕಡಲೆ ಬೆಳೆಯಲ್ಲಿ ಸೊರಗು ರೋಗ ನಿರ್ವಹಣೆಗೆ ರೈತರು ಅನುಸರಿಸಬೇಕಾದ ಕ್ರಮಗಳು
ಧಾರವಾಡ 16: ಧಾರವಾಡ ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೀಜಗಳು 1,81,595 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಖ್ಯ ಹಿಂಗಾರು ಬೆಳೆ ಆಗಿರುವ ಕಡಲೆಯಲ್ಲಿ ಅಲ್ಲಲ್ಲಿ ಸೊರಗು ರೋಗದ ಬಾಧೆ ಕಂಡು ಬರುತ್ತಿದ್ದು, ಪ್ರಾರಂಭದಲ್ಲಿ ಸ್ಥಾನಿಕವಾಗಿ 1 ಅಥವಾ 2 ಗಿಡಗಳಲ್ಲಿ ಕಂಡುಬಂದು ನಂತರ ಸಂಪೂರ್ಣ ಹೊಲವು ಬಾಧೆಗೆ ಒಳಪಡುವ ಸಾಧ್ಯತೆಯಿರುವುದು. ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಕಡಲೆಯಲ್ಲಿ ಸೊರಗು ರೋಗ ನಿರ್ವಹಣೆ: ಪ್ರತಿ ವರ್ಷ ಪದೇಪದೇ ಅದೇ ಕ್ಷೇತ್ರದಲ್ಲಿ ಕಡಲೆ ಬೆಳೆಯನ್ನು ಅಥವಾ ಮುಂಗಾರಿನಲ್ಲಿ ದ್ವಿದಳ ಧಾನ್ಯ ಬೆಳೆದು ಹಿಂಗಾರಿನಲ್ಲಿ ಕಡಲೆ ಬೆಳೆಯುವುದರಿಂದ ಸೊರಗು ರೋಗದ ಬಾಧೆ ಹೆಚ್ಚಾಗುತ್ತದೆ ಆದ್ದರಿಂದ ಬೆಳೆ ಪರಿರ್ವತನೆ ಅವಶ್ಯ. ಸೊರಗು ರೋಗ ಬಾಧೆಗೊಳಗಾದ ಸಸಿಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಕಿತ್ತು ನಾಶಪಡಿಸಬೇಕು ನಂತರ ರೋಗ ಹರಡದಂತೆ ಸಂಯುಕ್ತ ಶೀಲೀಂಧ್ರನಾಶಕ (ಶೇ 37.5 ಕಾರ್ಬಕ್ಸಿನ್ + ಶೇ 37.5 ಥೈರಾಮ್ ಡಬ್ಲೂ.ಎಸ್.)ವನ್ನು 2 ಗ್ರಾಂ ಪ್ರತಿ ಲೀಟರ್ಗೆ ನೀರಿಗೆ ಬೆರಸಿ ಬಾಧಿತ ಸಸಿಗಳ ಸುತ್ತಮುತ್ತ ಬೇರುಗಳಿಗೆ ಉಣಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 