ಲಾಕ್ ಡೌನ್ ವೇಳೆ ಮಾನಸಿಕ ಆರೋಗ್ಯ ಮುಖ್ಯ: ರಹಾನೆ
ಮುಂಬೈ, ಏ 3,ಕೊರೊನಾ ವೈರಸ್ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಗಳ ಕ್ರಮವನ್ನು ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯಾ ರಹಾನೆ, ಶ್ಲಾಘಿಸಿದ್ದು, ಲಾಕ್ಡೌನ್ನಂಥ ಕಠಿಣ ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಹ ಅತ್ಯಂತ ಮುಖ್ಯವಾದ ಕೆಲಸ ಎಂದು ಹೇಳಿದ್ದಾರೆ.
"ಲಾಕ್ಡೌನ್ ಸಮಯದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಕೂಡ ಅತಿ ಮುಖ್ಯ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ, ಬಿಎಂಸಿ ಮತ್ತು ಎಎಂಪಿ ಕಾರ್ಯ ಶ್ಲಾಘನೀಯ. ಜನರ ಮಾನಸಿಕ ಸ್ವಾಸ್ಥ್ಯಕ್ಕಾಗಿ ಅವರನ್ನು ಬೆಂಬಲಿಸಲು ಉಚಿತ ಸಹಾಯವಾಣಿಯನ್ನು ರಚಿಸಿರುವುದು ಅತ್ಯುತ್ತಮ ಕಾರ್ಯ," ಎಂದು ರಹಾನೆ ಸಹಾಯವಾಣಿ ಸಂಖ್ಯೆಯೊಂದಿಗೆ ಟ್ವೀಟ್ ಮಾಡಿದ್ದಾರೆ.ಕಳೆದ ಮಾರ್ಚ್ 24 ರಿಂದ ದೇಶವು ಲಾಕ್ ಡೌನ್ ಆಗಿದೆ ಮತ್ತು ಕ್ರಿಕೆಟಿಗರು ಸೇರಿದಂತೆ ದೇಶದ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಒಂದು ವೇಳೆ ಕೊರೊನಾ ವೈರಸ್ ಮಾರಣಾಂತಿಕ ವೈರಸ್ ಇಲ್ಲವಾಗಿದ್ದಲ್ಲಿ ಈಗಾಗಲೇ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಟಗಾರರು ಬ್ಯೂಸಿಯಾಗುತ್ತಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 