ಶ್ರಮಿಕ ರೈಲಿನ ಮೂಲಕ ಮುಂಬೈನಿಂದ ವಲಸಿಗರು ಕಲಬುರಗಿಗೆ ಆಗಮನ
ಕಲಬುರಗಿ, ಮೇ 12,ಕೊರೊನಾ ಹಾಟ್ ಸ್ಪಾಟ್ ಆಗಿರುವ ಸೂರ್ಯ ನಗರಿ ಕಲಬುರಗಿಗೆ ಈಗ ಮತ್ತೊಂದು ತಲೆನೋವು ಆರಂಭವಾಗಿದೆ.ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸಿಲುಕಿದ್ದ ವಲಸಿಗ ಕಾರ್ಮಿಕರು ವಿಶೇಷ ಶ್ರಮಿಕ ರೈಲಿನ ಮೂಲಕ ತಡರಾತ್ರಿ ಕಲಬುರಗಿ ರೈಲು ನಿಲ್ದಾಣಕ್ಕೆ ಆಗಮಿಸಿದ್ದಾರೆ. ಕಾರ್ಮಿಕರನ್ನು ಹೊತ್ತಿಕೊಂಡು ಮುಂಬೈನಿಂದ ಸೋಮವಾರ ಹೊರಟಿದ್ದ ವಿಶೇಷ ರೈಲು ತಡರಾತ್ರಿ 2 ಗಂಟೆಗೆ ಕಲಬುರಗಿ ರೈಲ್ವೆ ನಿಲ್ದಾಣ ತಲುಪಿತು.ಕಾರ್ಮಿಕರನ್ನು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್, ಜಿಲ್ಲಾಧಿಕಾರಿ ಶರತ್ ಬಿ ಅವರು ರೈಲು ನಿಲ್ದಾಣದಲ್ಲಿ ಬರಮಾಡಿಕೊಂಡರು.ಕುಟುಂಬ ಸಮೇತ ಕಲಬುರಗಿಗೆ ವಾಪಸ್ಸಾದ 1,200ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನುರೈಲು ನಿಲ್ದಾಣದಲ್ಲಿಯೇ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸೀಲು ಹಾಕಿ ಅವರವರ ಊರುಗಳಿಗೆ ಬಸ್ಸುಗಳಲ್ಲಿ ಕಳುಹಿಸಿ ಕೊಡಲಾಯಿತು.ಈಗಾಗಲೇ ಕಾರ್ಮಿಕರನ್ನು ಅವರ ಊರುಗಳ ಬಳಿಯೇ ಸರ್ಕಾರಿ ಕ್ವಾರಂಟೈನ್ ನಲ್ಲಿ ಇರಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 