ಕ್ಷೀರಭಾಗ್ಯ ಯೋಜನೆಯಡಿ ವಿಕಲಚೇತನ ಮಕ್ಕಳಿಗೆ ಹಾಲು ವಿತರಣೆ
ಕಾರವಾರ 03 : ನಗರದ ಆಶಾನಿಕೇತನ ಶಾಲೆಯ ವಿಕಲಚೇತನ ಮಕ್ಕಳಿಗೆ ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ವಿನೋದ ನಾಯಕ ಹಾಲನ್ನು ವಿತರಿಸುವ ಮೂಲಕ ವಿಶೇಷ ಶಾಲೆಗಳ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯನ್ನು ನವ್ಹಂಬರ 1 ರಂದು ಜಿಲ್ಲೆಯಲ್ಲಿ ಪ್ರಾರಂಬಿಸಲಾಯಿತು.
ರಾಜ್ಯದಲ್ಲಿನ 155 ವಿಶೇಷ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಅಂದಾಜು 10,567 ವಿಶೇಷ ಚೇತನ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ 5 ದಿನ ಉಚಿತ ಹಾಲು ವಿತರಿಸಲು ಸಕರ್ಾರವು ಆದೇಶಿಸಿದ್ದು, ರಾಜ್ಯೋತ್ಸವದಂದು ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಹಾಲು ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾರವಾರ ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿದರ್ೇಶಕಿ ಪ್ರಿಯಾ ಡಿ. ನಾಯಕ, ಜಿಲ್ಲಾ ವಿಕಲಚೇತನ ಮಕ್ಕಳ ಅಧಿಕಾರಿ ಸತೀಶ ನಾಯ್ಕ, ಅಕ್ಷರ ದಾಸೋಹದ ತಾಲೂಕು ಮತ್ತು ಜಿಲ್ಲಾ ಕಛೇರಿಯ ಸಿಬ್ಬಂದಿಗಳು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಪ್ರೀತಿಯಿಂದ ಪಾಲ್ಗೊಂಡು ವಿದ್ಯಾಥರ್ಿಗಳಿಗೆ ಹಾಲು ವಿತರಣೆ ಮಾಡಿದರು.
ಜಿಲ್ಲೆಯ ಶಿರಸಿ, ಸಿದ್ದಾಪುರ, ಮುಂಡಗೋಡ ಮತ್ತು ಯಲ್ಲಾಪುರದಲ್ಲಿರುವ ಇಂತಹ 6 ಶಾಲೆಗಳ 246 ಮಕ್ಕಳಿಗೂ ಉಚಿತ ಹಾಲು ನೀಡುವದನ್ನು ಪ್ರಸಕ್ತ ಮಾಹೆಯಿಂದ ಆರಂಭಿಸಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 