650ಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್ ವಿತರಿಸಿದ ಸಚಿವ ಗೋಪಾಲಯ್ಯ
ಬೆಂಗಳೂರು, ಮೇ 20, ದೇಶಾದ್ಯಂತ 4 ನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಜನರು ಕೆಲಸಗಳಿಲ್ಲದೆ ಮನೆಯಲ್ಲಿ ಇದ್ದಾರೆ. ಅವರಿಗೆ ಆಹಾರದ ಕೊತರೆಯಾಗಬಾರದೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಗೋಪಾಲಯ್ಯ ಬುಧವಾರ ಸ್ವ ಕ್ಷೇತ್ರ ಮಹಾಲಕ್ಷ್ಮೀಪುರಂ ವಾರ್ಡ್ ನಂ 86ರ ಬಡ ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು.ಇಂದು ಬೆಳಗ್ಗೆ ನಾಗಪುರ ವಾರ್ಡ್ ನ ಶಾಸಕರ ಭವನದಲ್ಲಿ ಸಚಿವರು 650 ಕ್ಕೂ ಹೆಚ್ಚು ಜನರಿಗೆ ಆಹಾರದ ಕಿಟ್ ಗಳನ್ನು ನೀಡಿದ್ದು, ಈ ವೇಳೆ ಜನರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಾಗಿತ್ತು.ಈ ಸಂದರ್ಭ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆ ಉಪಾಧ್ಯಕ್ಷ ಜಯರಾಮಯ್ಯ , ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾ.ಮ. ವೆಂಕಟೇಶ್, ರೈಲ್ವೇ ನಾರಾಯಣ್, ಶಿವಾನಂದ ಮೂರ್ತಿ, ಹಾಗೂ ಮುಖಂಡರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 