ಅಸುಂಡಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಸಚಿವ ಎಚ್.ಕೆ.ಪಾಟೀಲ ಅವರಿಂದ ಭೂಮಿ ಪೂಜೆ ಕಾರ್ಯಕ್ರಮ
Minister H.K. Patil conducts Bhoomi Puja program for various road works in Asundi village
ಗದಗ 18: ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮೃಗಾಲಯ ಮುಖ್ಯ ರಸ್ತೆಯಿಂದ ರವಿ ಹುಲಕೋಟಿ ಇವರ ಮನೆವರೆಗಿನ ಸಿಸಿ ರಸ್ತೆ ಕಾಮಗಾರಿಯ ಅಂದಾಜು ಮೊತ್ತ 20 ಲಕ್ಷ. ರೂ.. ವೆಚ್ಚದಲ್ಲಿ, ಅಸುಂಡಿ ಕುರ್ತಕೋಟಿ ಗ್ರಾಮದ 36 ಪ್ಲಾಟ್ ಆಶ್ರಯ ಬಡಾವಣೆ ರಸ್ತೆ ಸುಧಾರಣೆ ಕಾಮಗಾರಿ ಅಂದಾಜು ಮೊತ್ತ 10 ಲಕ್ಷ ರೂ ವೆಚ್ಚ , ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ರಾಘವೇಂದ್ರ ಹುಲಕೋಟಿ ಇವರ ಹೊಲದವರೆಗೆ ಸುಧಾರಣೆ ( 0.00 ರಿಂದ 6 ಕಿ.ಮೀ) ಅಂದಾಜು ಮೊತ್ತ 15 ಲಕ್ಷ ವೆಚ್ಚ, ಗದಗ ತಾಲೂಕು ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ಬೆಳ್ಳಿಕೊಪ್ಪ ಹನುಮಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆ ಸುಧಾರಣೆ ( 0.00 ರಿಂದ 6 ಕಿ.ಮೀ ) ಅಂದಾಜು ಮೊತ್ತ 20 ಲಕ್ಷ ಈ ಕಾಮಗಾರಿಗಳಿಗೆ ಸೋಮವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. ರಸ್ತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಕಾಲಾವಧಿಯಲ್ಲಿಯೇ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಗಣ್ಯರು, ಹಿರಿಯರು, ಗ್ರಾಮಸ್ಥರು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 