ರೇಷ್ಮೆ ನೌಕರರ ಸುರಕ್ಷತೆಗೆ ಸಚಿವ ನಾರಾಯಣ ಗೌಡ ಸೂಚನೆ
ಬೆಂಗಳೂರು, ಮಾ.24, ಕರೋನಾ ಸೋಂಕು ಹಿನ್ನೆಲೆಯಲ್ಲಿ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ ವ್ಯಾಪ್ತಿಯ ನೌಕರರು ಸುರಕ್ಷತಾ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಸಚಿವ ಡಾ. ನಾರಾಯಣಗೌಡ ಸೂಚಿಸಿದ್ದಾರೆ. ಮೂರೂ ಇಲಾಖೆಯ ಕಾರ್ಯದರ್ಶಿಗಳಿಗೆ ಸಚಿವರು ಈ ಬಗ್ಗೆ ಆದೇಶ ನೀಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ರೇಷ್ಮೆ ಬೆಳಗಾರರ ಸುರಕ್ಷತೆ ಬಗ್ಗೆ ಗಮನಹರಿಸಬೇಕು. ರೇಷ್ಮೆ ಗೂಡನ್ನ ಮಾರಾಟ ಮಾಡದೆ ಇಡಲು ಸಾಧ್ಯವಿಲ್ಲ. ರೈತರು ಮಾರುಕಟ್ಟೆಗೆ ಬಂದಾಗ ಜನಜಂಗುಳಿ ಆಗುತ್ತದೆ. ಈ ಸಂದರ್ಭದಲ್ಲಿ ಕರೋನಾ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್ಲ ರೇಷ್ಮೆ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ನಾರಾಯಣಗೌಡ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 