ಪತ್ರಕರ್ತರಿಗೆ ವಿಶೇಷ ಕೋವಿಡ್ ತಪಾಸಣಾ ಶಿಬಿರ ನಡೆಸಲು ಸಚಿವ ಸುರೇಶ್ ಕುಮಾರ್ ಮನವಿ
ಬೆಂಗಳೂರು, ಏ.21, ದಿನನಿತ್ಯವೂ ಸಾರ್ವಜನಿಕರ ಮಧ್ಯೆಯೇ ಇರುವ ಪರ್ತಕರ್ತರಿಗೂ ಮಹಾರಾಷ್ಟ್ರ ಮಾದರಿಯಲ್ಲಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಚಿವರು, ಮಹಾರಾಷ್ಟ್ರದಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡಿದ್ದ ವಿಶೇಷ ಕೋವಿಡ್ ತಪಾಸಣಾ ಶಿಬಿರದಲ್ಲಿ 171 ಮಂದಿ ಪತ್ರಕರ್ತರ ಗಂಬಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು, ಈ ಪೈಕಿ 53 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.ಆದ್ದರಿಂದ ಕರ್ನಾಟಕದಲ್ಲಿಯೂ ಈ ರೀತಿ ಪತ್ರಕರ್ತರಿಗಾಗಿ ತಪಾಸಣಾ ಮಾಡಬೇಕಾದ ಅಗತ್ಯವಿದೆ. ಆದ್ದರಿಂದ ಆರೋಗ್ಯ ಮತ್ತು ವಾರ್ತಾ ಇಲಾಖೆಗೆ ತುರ್ತು ನಿರ್ದೇಶನ ನೀಡಿ ಸಾರ್ವಜನಿಕರ ಸಂಪರ್ಕದಲ್ಲಿಯೇ ಇರುವ ಪತ್ರಕರ್ತರಿಗೆ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸಬೇಕು ಎಂದು ಈ ಮೂಲಕ ಕೋರುತ್ತೇನೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 