ಕೇಂದ್ರದಂತೆ ರಾಜ್ಯದಲ್ಲೂ ಸಚಿವರು, ಶಾಸಕರ ವೇತನಕ್ಕೆ ಕತ್ತರಿ ..!
ಬೆಂಗಳೂರು, ಎ 9,ಕರು, ಸಚಿವರು, ಎಂಎಲ್ ಸಿ ಗಳ ಶೇ.30ರಷ್ಟು ವೇತನವನ್ನು ಕಡಿತ ಮಾಡಲು ರಾಜ್ಯ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ. ಸಿ ಮಾದುಸ್ವಾಮಿ ಈ ವಿಷಯ ವಿಷಯ ಪ್ರಕಟಿ ಇದರಿಂದ 15 ಕೋಟಿ ರೂಪಾಯಿ ಸರ್ಕಾರದ ಬೊಕ್ಕಸಕ್ಕೆ ಬರಲಿದೆ ಎಂದು ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಇನ್ನು ರಾಜ್ಯದಲ್ಲಿ ಎರಡು ತಿಂಗಳಿಗೆ ಆಗುವಷ್ಟು ಪಡಿತರ ಸಂಗ್ರಹವಿದೆ. ರೇಷನ್ ಕಾರ್ಡ್ ಗೆ ಅರ್ಜಿ ಹಾಕುವವರಿಗೂ ರೇಷನ್ ಕೊಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 49 ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದು, ಪ್ರತಿ ತಾಲೂಕಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಗ್ರಾಮೀಣ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವರ್ಷದವರೆಗೆ ಶಾಸಕರು, ಸಚಿವರ ಸಂಬಳ ಶೇ.30ರಷ್ಟು ಕಡಿತ ಮಾಡುವುದರಿಂದ 15 ಕೋಟಿ ಹಣ ಬರಲಿದೆ ಎಂದು ಸಚಿವರು ವಿವರಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 