ಪೌರ ಕಾರ್ಮಿಕರ ನೇಮಕಾತಿ ಪೂರ್ಣಗೊಳಿಸುವಂತೆ ಸಚಿವರಿಗೆ ಮಾಳಗಿ ಒತ್ತಾಯ
ಹಾವೇರಿ17: ಸ್ಥಳೀಯ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯಯನ್ನು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಯವರು ಮುಂದಾಗಬೇಕು ಎಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯಉಡಚಪ್ಪ ಮಾಳಗಿ ಸಚಿವರನ್ನು ಒತ್ತಾಯಿಸಿದ್ದಾರೆ.
ಜಿಲ್ಲೆಯ ಬಹುಪಾಲು ತಾಲೂಕಗಳಲ್ಲಿ ಪೌರ ಕಾರ್ಮಿಕರ ನೇಮಕಾತಿಯನ್ನು ಮಾಡಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿ 90 ಕ್ಕೂ ಹೆಚ್ಚು ಕಾರ್ಮಿಕರು ದುಡಿಯುತ್ತಿದ್ದಾರೆ. ದುಡಿಯುವ ವರ್ಗಕ್ಕೆ ಈ ರೀತಿ ವಿಳಂಬ ನೀತಿ ಅನುಸರಿಸಿದರೆ ಹೇಗೆ ?ಕೊಡಲೇ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಯವರು ಮಧ್ಯ ಪ್ರವೇಶ ಮಾಡಿಪೌರ ಕಾರ್ಮಿಕರರಿಗೆ ನ್ಯಾಯ ಒದಗಿಸಿಕೊಡಬೇಕು. ಸುಮಾರು 10-15 ವರ್ಷಗಳಿಂದ ದುಡಿಯುವ ಕಾರ್ಮಿಕರ ಪರವಾಗಿ ಮತ್ತೊರ್ವ ಸಚಿವ ಬಿಸಿ ಪಾಟೀಲ ಹಾಗೂ ಸ್ಥಳೀಯ ಶಾಸಕ ನೆಹರು ಓಲೇಕಾರ ಅವರು ಸರ್ಕಾರ ದ ಮಟ್ಟದಲ್ಲಿ ಸೂಕ್ತ ಕ್ರಮಕೈಗೊಂಡು ಅಧಿಕಾರಿಗಳಿಗೆ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸುವಂತಾಗಬೇಕಾಗಿದೆ. ಕೊಡಲೇ ಜನಪ್ರತಿನಿಧಿಗಳು ಕಾರ್ಮಿಕರ ನೇಮಕಾತಿ ಬೇಡಿಕೆ ಈಡೇರಿಕೆಗೆ ಸ್ಪಂಧಿಸಿ ಅವರ ಪರವಾಗಿ ನಿಲ್ಲಬೇಕು.ಇನ್ನೂ ವಿಳಂಬ ಧೋರಣೆಯಿಂದ ನಗರಸಭೆ ಕಾರ್ಯವೈಖರಿಯಲ್ಲಿ ಏರುಪೇರುಂಟಾಗಬಹುದು. ಜಿಲ್ಲಾಧಿಕಾರಿಗಳು ಈ ನೇಮಕಾತಿ ಪ್ರಕ್ರಿಯೆಗೆ ಮುಂದಾಗಬೇಕು. ಇನ್ನು ವಿಳಂಬ ಕಂಡು ಬಂದರೆಡಿಎಸ್ಎಸ್ ಸಂಘಟನೆ ಸುಮ್ಮೆನೆ ಇರುವುದಿಲ್ಲ. ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಉಡಚಪ್ಪ ಮಾಳಗಿ ಜನಪ್ರತಿನಿಧಿಗಳಿಗೆ ಆಗ್ರಹಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 