ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಗೆಮಿಷನ್ 40 ಆದ್ಯತೆ ನೀಡಿ
Mission 40 prioritizes improving SSLC results
ಹೂವಿನ ಹಡಗಲಿ 20: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚು ಮಾಡಲು ಮಿಷನ್ 40 ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಶನಿವಾರ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ತಾಲೂಕು ಮುಖ್ಯ ಗುರುಗಳ ಶೈಕ್ಷಣಿಕ ಪ್ರಗತಿ ಸಭೆಯಲ್ಲಿ ಮಾತನಾಡಿದರು.ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ ಎಲ್ಲಾ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು. ಇದಕ್ಕೆ ಪೂರಕವಾಗಿ ಆರು ವಿಷಯಗಳಿಗೆ ಪ್ರತಿ ವಾರ ಮಿಷನ್ 40 ವ್ಯಾಪ್ತಿಗೆ ಬರುವ ನಿಧಾನಗತಿ ಕಲಿಕೆಯ ವಿದ್ಯಾರ್ಥಿಗಳಿಗೆ ವಿಶೇಷ ಗಮನ ಹರಿಸಿ ಮಾರ್ಗದರ್ಶನ ನೀಡಿರಿ ಎಂದು ತಿಳಿಸಿದರು.ಟಾರ್ಗೆಟ್ 625ಪ್ರತಿ ಪ್ರೌಢಶಾಲೆಯಿಂದ 625 ಅಂಕ ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಜತೆಗೆ ಮಾದರಿ ಪ್ರಶ್ನೆ ಪತ್ರಿಕೆ ವಿತರಿಸಿ ಅಂಕ, ಮಾಹಿತಿ ತಿಳಿಸಿ ಕೊಡಿ ಎಂದರು.
ಈ ಬಾರಿ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳು ಶೇಕಡಾ 100 ರಷ್ಟು ಫಲಿತಾಂಶ ಪಡೆಯಲು ನಿರ್ಧಿಷ್ಟ ಗುರಿ ಸಾಧಿಸುವ ದಿಕ್ಕಿನೆಡೆಗೆ ಪ್ರಯತ್ನ ಮಾಡಿರಿ ಎಂದರು.ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆ ಇಟ್ಟಿಗಿ, ಉತ್ತಂಗಿ ಸರ್ಕಾರಿ ಪ್ರೌಢಶಾಲೆಗಳು ಹಾಗೂ ದಾಸರಹಳ್ಳಿ ತಾಂಡಾ ಪ್ರಾಥಮಿಕ ಶಾಲೆ ನಾಲ್ಕು ಶಾಲೆಗಳು ಕೆ ಪಿ ಎಸ್ ಶಾಲೆಗಳಾಗಿ ಆಯ್ಕೆ ಆಗಿವೆ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಯು ಡೈಸ್ ಅಪಾರ್ ಐಡಿ ಎಸ್ ಎ ಟಿ ಎಸ್ ಬಗ್ಗೆ ಮಾಹಿತಿ ನೀಡಿದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪಪ್ರತಿನಿತ್ಯ ಮಧ್ಯಾಹ್ನ 2 ಗಂಟೆಯೊಳಗೆ ಬಿಸಿಯೂಟ ಮೊಟ್ಟೆ ಬಾಳೇಹಣ್ಣು ಫಲಾನುಭವಿಗಳ ಮಾಹಿತಿ ಇಂದೀಕರಿಬೇಕು. ಶಾಲೆಗಳಿಗೆ ಪೂರೈಕೆ ಆಗುವ ಅಕ್ಕಿ ಬೇಳೆ ಗೋಧಿ ಕೆಡದಂತೆ ಸ್ವಚ್ಛಗೊಳಿಸಿ ಅಡುಗೆಗೆ ಬಳಸಿರಿ ಎಂದು ಹೇಳಿದರು.ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್ ಉಪ ಪ್ರಾಂಶುಪಾಲ ರವೀಂದ್ರನಾಥ ಬಿ ಉಪಸ್ಥಿತರಿದ್ದರು.ಶಿಕ್ಷಣ ಸಂಯೋಜಕ ಹಣ್ಣಿ ನರೇಶ್ ನಿರ್ವಹಿಸಿದರು.ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಗಳ ಮುಖ್ಯ ಗುರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 