ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಚಾಲನೆ
ಬೆಂಗಳೂರು, ಏ.11,ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ. ಕಳಸದ ಚಾಲನೆ ನೀಡಿದರು.ಕೆಎಸ್ ಆರ್ ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ - 2 ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇ ಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು.ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ.ಹತ್ತು ವರ್ಷದ ಹಳೆಯ ಬಸ್ಸನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆ ಎಸ್ ಆರ್ ಟಿ ಸಿ , ಸುಮಾರು 20 ಸಾವಿರ ವೆಚ್ಚದಲ್ಲಿ ಅನುಪಯುಕ್ತ ಬಸ್ಸನ್ನು ಪುನರ್ ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಡಿಪೋಗಳಲ್ಲಿ ಸ್ಕ್ಯ್ರಾಪ್ ಬಸ್ ಗಳನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಲಾಗುವುದು. ಬಸ್ ಮುಂಭಾಗ ಹತ್ತಿ ಹಿಂಭಾಗ ಇಳಿದರೆ ಸಂಪೂರ್ಣವಾಗಿ ದೇಹಕ್ಕೆ ವೈರಾಣು ನಿರೋಧಕ ದ್ರಾವಣ ಸಿಂಪಡಣೆ ಆಗಲಿದೆ.ಈ ಮೂಲಕ ಕೊರೋನಾ ಸೊಂಕು ನಿವಾರಣೆಗೆ ಮುಂಜಾಗ್ರತಾ ಕ್ರಮದ ಮತ್ತೊಂದು ಉಪಕ್ರಮ ಇದಾಗಿದೆ.ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು (ಬಸ್ ಸಂಚಾರ ಇಲ್ಲದಿರುವುದರಿಂದ ) ಓಡಾಟ ಇಲ್ಲದಿರುವುದರಿಂದ, ಬೆಂಗಳೂರು ನಗರದಲ್ಲಿ ಅವಶ್ಯಕ ಸೇವೆ ಸಲ್ಲಿಸುತ್ತಿರುವ ಪೊಲೀಸ್ , ಮೆಡಿಕಲ್, ಪೌರ ಸಿಬ್ಬಂದಿಗಳ ಅನುಕೂಲಕ್ಕಾಗಿ ಈ ಬಸ್ಸು ಸಂಚರಿಸಲಿದೆ ಪ್ರಕಟಣೆ ತಿಳಿಸಿದೆ.ಈ ಸಂದರ್ಭದಲ್ಲಿ ನಿರ್ದೇಶಕರಾದ (ಭದ್ರತಾ ಮತ್ತು ಜಾಗೃತ) ಡಾ. ರಾಮ್ ನಿವಾಸ್ ಸಪೆಟ್, (ಸಿಬ್ಬಂದಿ ಮತ್ತು ಪರಿಸರ) ಕವಿತಾ ಎಸ್ ಮನ್ನಿಕೇರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 