ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ
Mobile phone found in Karwar District Jail
ಕಾರವಾರ 15: ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿವೆ. ಏಳು ಮೊಬೈಲ್ಗಳನ್ನು ಕಾರವಾರ ಜೈಲು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೈಲು ಅಧಿಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ನೇತೃತ್ವದಲ್ಲಿ ಸೋಮವಾರ ಕಾರ್ಯಾಚರಣೆ ಮಾಡುವ ವೇಳೆ ಮೊಬೈಲ್ ಪತ್ತೆಯಾದವು.
ಇದೇ ಡಿಸೆಂಬರ್ ಮೊದಲ ವಾರದಲ್ಲಿ ಜೈಲಿನಲ್ಲಿ ಕೈದಿಗಳಿಂದ ಗಲಾಟೆ ನಡೆದಿತ್ತು. ಗಾಂಜಾ ಕೊಡಲಿಲ್ಲ ಎನ್ನುವ ಕಾರಣಕ್ಕೆ ಮಂಗಳೂರು ಜೈಲ್ ನಿಂದ ವರ್ಗಾವಣೆಯಾಗಿ ಬಂದಿದ್ದ ನಿಹಾಲ್ ಮತ್ತು ಅಹಮ್ಮದ್ ,ಮೂವರು ಜೈಲು ಸಿಬ್ಬಂದಿಗಳ ಮೇಲೆ ಕೈದಿಗಳು ದಾಳಿ ಮಾಡಿದ್ದರು. ಮತ್ತೊಂದು ಪ್ರಕರಣದಲ್ಲಿ ಜೈಲಿನ ಸಭಾ ಭವನದಲ್ಲಿದ್ದ ಟಿವಿಯನ್ನ ಒಡೆದುಹಾಕಿದ್ದರು. ಮಂಗಳೂರು ಮೂಲದ ಮೂವರು ವಿಚಾರಣಾಧೀನ ಖೈದಿಗಳು ಜೈಲಿನಲ್ಲಿ ಗಲಾಟೆ ಎಬ್ಬಿಸಿದ್ದರು.
ಈ ಹಿನ್ನಲೆಯಲ್ಲಿ ಜೈಲಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದರು. ತಪಾಸಣೆ ವೇಳೆ ಏಳು ಮೊಬೈಲ್ ಹಾಗೂ ಚಾರ್ಜರ್ ಗಳು ಪತ್ತೆಯಾಗಿವೆ. ಈ ಸಂಭಂದ ಕಾರವಾರ ನಗರ ಠಾಣೆಯಲ್ಲಿ ಜೈಲು ಅಧಿಕಾರಿ ದೂರು ನೀಡಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 