ಕಾಶ್ಮೀರ ಕಣಿವೆಯಲ್ಲಿ ಇಂದಿನಿಂದ ಮೊಬೈಲ್ ಸೇವೆ
ನವದೆಹಲಿ, ಅ 12: ಜಮ್ಮು - ಕಾಶ್ಮೀರದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಣೆಯಾಗುತ್ತಿದ್ದು ಇಂದಿನಿಂದ ಮೊಬೈಲ್ ಸೇವೆ ದೊರೆಯಲಿದೆ ಎಂದು ಸ್ಥಳೀಯ ಅಧಿಕಾರಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಪ್ರವಾಸಿಗರ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಗುರುವಾರವಷ್ಟೇ ಸರ್ಕಾರ ಹಿಂದಕ್ಕೆ ಪಡೆದಿತ್ತು. ಕಾಶ್ಮೀರಕ್ಕೆ ಹೆಚ್ಚಿನ ಪ್ರವಾಸಿಗರು, ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೊಬೈಲ್ ಸೇವೆಯನ್ನು ಆರಂಭ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜಮ್ಮು - ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಕಳೆದ ಸುಮಾರು 60 ದಿನಗಳಿಂದಲೂ ಸಾಮಾನ್ಯ ಜನಜೀವನ ಬಾಧಿತವಾಗಿತ್ತು. ಗುರುವಾರಷ್ಟೇ ಕಾಶ್ಮೀರ ಸರ್ಕಾರ ಬಂಧನದಲ್ಲಿದ್ದ ಮೂವರು ರಾಜಕೀಯ ನಾಯಕರನ್ನು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿತ್ತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 