ಆರ್ಬಿಐ ಕ್ರಮಗಳಿಂದ ಮಧ್ಯಮ ವರ್ಗ ಮತ್ತು ವಾಣಿಜ್ಯ-ವಹಿವಾಟುಗಳಿಗೆ ಪ್ರಯೋಜನಕರ-ಪ್ರಧಾನಿ ಮೋದಿ
ನವದೆಹಲಿ,
ಮಾರ್ಚ್ 27 ,ರೆಪೊ ದರ ಕಡಿತ, ಸಾಲಗಳ ಇಎಂಐ ಪಾವತಿ ಮುಂದೂಡಿಕೆ ಮತ್ತು ಹಣ
ಪ್ರಸರಣ ಹೆಚ್ಚಿಸಲು ರಿಸರ್ವ್ ಬ್ಯಾಂಕ್ ತೆಗೆದುಕೊಂಡಿರುವ ನಿರ್ಧಾರವನ್ನು
ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಕ್ರಮಗಳು ಮಾರುಕಟ್ಟೆಯಲ್ಲಿ ಹಣ
ಪ್ರಸರಣವನ್ನು ಹೆಚ್ಚಿಸುವುದಲ್ಲದೆ ಮಧ್ಯಮ ವರ್ಗ ಮತ್ತು ವಾಣಿಜ್ಯ-ವಹಿವಾಟುಗಳಿಗೆ
ನೆರವಾಗಲಿವೆ ಎಂದು ಹೇಳಿದ್ದಾರೆ. ಕರೋನವೈರಸ್ ಪರಿಣಾಮದಿಂದ ದೇಶದ ಆರ್ಥಿಕತೆ
ಕಾಪಾಡಲು ಆರ್ಬಿಐ ದಿಟ್ಟ ಮತ್ತು ಮಹಾ ಕ್ರಮಗಳನ್ನು ಕೈಗೊಂಡಿದೆ. ಈ ಕ್ರಮಗಳಿಂದ ಹಣ
ಪ್ರಸರಣ ಸುಧಾರಿಸುತ್ತದೆಯಲ್ಲದೆ ನಿಧಿಯ ವೆಚ್ಚವನ್ನು ಕಡಿಮೆ ಮಾಡುತ್ತದೆ. ಅಲ್ಲದೆ,
ಮಧ್ಯಮ ವರ್ಗ ಮತ್ತು ವಾಣಿಜ್ಯ-ವಹಿವಾಟುಗಳಿಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ಟ್ವೀಟ್
ಮಾಡಿದ್ದಾರೆ.ಕೊವಿದ್ -19 ನಿಂದ ಉಂಟಾಗುವ ನಷ್ಟವನ್ನು ತಗ್ಗಿಸುವ ಉದ್ದೇಶದಿಂದ
ಆರ್ಬಿಐ ಶುಕ್ರವಾರ ಹಲವಾರು ಕ್ರಮಗಳನ್ನು ಪ್ರಕಟಿಸಿದೆ.ರೆಪೊ ದರವನ್ನು 75 ಮೂಲಾಂಕ
ತಗ್ಗಿಸಿ ಶೇ 4.4 ಕ್ಕೆ ಇಳಿಸಿರುವುದು ಇವುಗಳಲ್ಲಿ ಪ್ರಮುಖವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 