ಮುಂಗಾರು ಹಂಗಾಮು ಸಿದ್ಧತೆ: ಬಳ್ಳಾರಿ ಜಿಲ್ಲೆಯಲ್ಲಿ ಚುರುಕುಗೊಂಡ ಕೃಷಿ ಚಟುವಟಿಕೆಗಳು
Monsoon season preparations: Agricultural activities have intensified in Bellary district
ಲೋಕದರ್ಶನ ವರದಿ
ಬಳ್ಳಾರಿ 02: ಜಿಲ್ಲೆಯಲ್ಲಿ ಮುಂಗಾರು ಪೂರ್ವದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಸಾಗರೋತ್ತರ ವೇಗವನ್ನು ಪಡೆದುಕೊಂಡಿದ್ದು, ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಪ್ರಸ್ತುತ ಲಭ್ಯವಿರುವ ಉತ್ತಮ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತಮ್ಮ ಕೃಷಿ ಭೂಮಿಯನ್ನು ಹದಗೊಳಿಸುವ ಕಾರ್ಯಗಳಲ್ಲಿ ಬಿಡುವಿಲ್ಲದೆ ತೊಡಗಿಸಿಕೊಂಡಿದ್ದಾರೆ. ರಂಟೆ-ಕುಂಟೆ ಹೊಡೆಯುವುದು, ರೋಟವೇಟರ್ ಹಾಗೂ ಎತ್ತುಗಳ ನೇಗಿಲು ಬಳಸಿ ಭೂಮಿಯನ್ನು ಹದಗೊಳಿಸುವ ದೃಶ್ಯಗಳು ಜಿಲ್ಲೆಯಾದ್ಯಂತ ಸಾಮಾನ್ಯವಾಗುತ್ತಿವೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆಯು 599.0 ಮಿ.ಮೀ ಆಗಿರುತ್ತದೆ. ಮೇ 31ರ ಅಂತ್ಯಕ್ಕೆ ಸರಾಸರಿ ವಾಡಿಕೆ ಮಳೆಯು 74.4 ಮಿ.ಮೀ ಇರಬೇಕಾಗಿದ್ದು, ಪ್ರಸ್ತುತ 72.4 ಮಿ.ಮೀ ನಷ್ಟು ಉತ್ತಮ ಮಳೆಯಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ. ಸೋಮಸುಂದರ್ ಅವರು ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 