ನಗಿಸಿದ ದೇವರಿಗೆ ಸ್ಮಾರಕ ನಿರ್ಮಾಣ ಖಚಿತ: ಜಗ್ಗೇಶ್
ಬೆಂಗಳೂರು, ಜ 29, ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿವಂಗತ ನರಸಿಂಹರಾಜು ಅವರ ಸ್ಮಾರಕ ನಿರ್ಮಾಣ ಬಗ್ಗೆ ವಿಶೇಷ ಆಸಕ್ತಿ ವಹಿಸಿರುವುದಾಗಿ ನಟ ಜಗ್ಗೇಶ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಅಭಿಮಾನಿಯೊಬ್ಬರು “ಕರ್ನಾಟಕದ ಜನರ ಹೃದಯ ಗೆದ್ದ ಹಾಸ್ಯ ನಟ ನರಸಿಂಹರಾಜು ಅವರ ಹೆಸರಲ್ಲಿ ಅವರ ನೆನಪು ಉಳಿಸಲು ತಿಪಟೂರಿನಲ್ಲಿ ಸ್ಮಾರಕ ಮಾಡಲಾಗುವುದು ಎಂದು ಕಾರ್ಯಕ್ರಮವೊಂದರಲ್ಲಿ ಅವರ ಶ್ರೀಮತಿಯವರಿಗೆ ಆಶ್ವಾಸನೆ ನೀಡಿದ್ದ ನೆನಪು, ಅದೇನಾದರೂ ಕಾರ್ಯಗತ ಆಗ್ತಿದೆಯಾ” ಎಂದು ಜಗ್ಗೇಶ್ ಅವರನ್ನು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ ಇದಕ್ಕೆ ಉತ್ತರಿಸಿರುವ ಜಗ್ಗೇಶ್, “ಖಂಡಿತ..ನಾನು ಹಾಗೂ ನನ್ನ ಗೆಳೆಯ, ಶಾಸಕ ನಾಗೇಶ್ ರವರು ಆ ಕಾರ್ಯದ ಬಗ್ಗೆ ವಿಶೇಷ ಆಸಕ್ತಿವಹಿಸಿರುವೆವು…ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನರಸಿಂಹರಾಜು ರವರ ಮಡದಿಗೆ ಕಳೆದವಾರ ನೀಡಿರುವೆ.. ನಗಿಸಿದ ದೇವರಿಗೆ ಖಡಿತ ನೆನಪಿನ ಸ್ಮಾರಕ ಆಗುತ್ತದೆ...ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 