ಮಹಾದಾಸೋಹದಲ್ಲಿ ಇಂದು ಭಕ್ತರಿಗೆ 18 ಲಕ್ಷಕ್ಕಿಂತಲೂ ಹೆಚ್ಚು ಬಿಸಿ ಬಿಸಿ ಮಿರ್ಚಿಗಳು
ಲೋಕದರ್ಶನ ವರದಿ
ಕೊಪ್ಪಳ 13: ಗವಿಮಠದ ಜಾತ್ರೆಯ ವಿಶೇಷತೆಗಳಲ್ಲೊಂದಾದ ಮಹಾದಾಸೋಹದಲ್ಲಿ ಇಂದು ಮಹಾರಥೋತ್ಸವದ ಎರಡನೇ ದಿನ ಲಕ್ಷ -ಲಕ್ಷ ಭಕ್ತರಿಗೆ ಉತ್ತರ ಕರ್ನಾಟಕ ಶೈಲಿಯ ರೊಟ್ಟಿ, ಚಪಾತಿ, ಪಲ್ಲೆ, ಮಾದಲಿ, ಹಾಲು, ತುಪ್ಪ, ಅನ್ನಾ, ಸಾಂಬಾರ್, ಚಟ್ನಿಪುಡಿ, ಮಜ್ಜಿಗೆ ಇವುಗಳ ಜೊತೆಗೆ ಬಿಸಿ ಬಿಸಿಯಾದ ಮಿರ್ಚಿಯನ್ನು ವಿತರಿಲಾಯಿತು. ಕಳೆದ 5 ವರ್ಷಗಳಿಂದಲೂ ಮಹಾದಾಸೋಹದಲ್ಲಿ ಮಿರ್ಚಿಗಳನ್ನು ನೀಡಲಾಗುತ್ತಿದೆ. ಮೊದಲಿಗೆ ಕೊಪ್ಪಳದ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಗೆಳೆಯರ ಬಳಗವು ಈ ಸೇವೆಗೈಯುತ್ತಿತ್ತು. ಈ ಸಲ ಗವಿಮಠವೇ ವಹಿಸಿಕೊಂಡಿದೆ. 18 ಕ್ವಿಂಟಾಲ್ ಕಡ್ಲಿಬೇಳೆ ಹಿಟ್ಟು, 15 ಕ್ವಿಂಟಾಲ್ ಹಸೆಮೆಣಸಿನಕಾಯಿ, 10 ಬ್ಯಾರಲ್ ಎಣ್ಣೆ ಅಲ್ಲದೇ ಜೀರಗಿ, ಅಡುಗೆ ಸೋಡಾ, ಇನ್ನಿತರ ವಸ್ತುಗಳನ್ನು ಬಳಸಿಕೊಂಡು ಮುಂಜಾನೆಯಿಂದ 300 ಕ್ಕಿಂತಲೂ ಹೆಚ್ಚೂ ಜನ ಬಾಣಸಿಗರು,ಸ್ವಯಂ ಸೇವಕರು ಬಸಿ ಬಿಸಿ ಮಿರ್ಚಿಗಳನ್ನು ತಯಾರಿಸುವಂತಹ ಹಾಗೂ ವಿತರಿಸುವಂತಹ ಕೆಲಸದಲ್ಲಿ ಬೆಳಗಿನಿಂದ ರಾತ್ರಿಯವರೆಗೆ ನಿರತರಾಗಿದ್ದಾರೆ. ಇಂದು ಭಕ್ತರಿಗೆ 18 ಲಕ್ಷಕ್ಕಿಂತಲೂ ಹೆಚ್ಚೂ ಮಿರ್ಚಿಗಳು ತಯಾರಾಗುತ್ತಿವೆ. ಭಕ್ತರಿಗೆ ಪ್ರಸಾದದಲ್ಲಿ ಮಿರ್ಚಿಗಳನ್ನು ಒದಗಿಸುವ ಸಂಕಲ್ಪವನ್ನು ಪೂಜ್ಯರು ಮಾಡಿದ್ದರಿಂದ ಪ್ರತಿವರ್ಷ ಮಾದಾಸೋಹದಲ್ಲಿ ಭಕ್ತರಿಗೆ ಮಿರ್ಚಿಗಳನ್ನು ನೀಡಲಾಗುತ್ತಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 