ಮೂರು ಸಾವಿರಕ್ಕೂ ಹೆಚ್ಚು ಮನೆಗಳು ನೆಲಸಮ
ಕೋಲ್ಕತ್ತಾ, ನ 11 : ಬುಲ್ ಬುಲ್ ಚಂಡಮಾರುತದ ಪಶ್ಚಿಮ ಬಂಗಳ ಮತ್ತು ಒಡಿಸ್ಸಾ ಭಾರಿ ಅನಾಹುತ ಉಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಮತ್ತು ಲಕ್ಷಾಂತರ ಎಕರೆ ಪ್ರದೇಶದಲ್ಲಿನ ಬೆಳೆ ಹಾಳಾಗಿ ವ್ಯಾಪಕ ನಷ್ಟ ಉಂಟಾಗಿದೆ ಎಂದು ಸಚಿವ ಜಾವದ್ ಖಾನ್ ಹೇಳಿದ್ದಾರೆ. ಲಕ್ಷಾಂತರ ಜನರು ಮನೆ-ಮಠ ಕಳೆದುಕೊಂಡು ಆಶ್ರಯ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಚಂಡಮಾರುತದ ಹೊಡೆತಕ್ಕೆ ನೂರಾರು ಮರಗಳು ಉರುಳಿ ಬಿದ್ದಿದ್ದು ಒಟ್ಟು 2,473 ಮನೆಗಳು ನೆಲಸಮವಾಗಿವೆ. 26 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಬುಲ್ ಬುಲ್ ಚಂಡಮಾರುತದಿಂದ 2.73 ಲಕ್ಷ ಕುಟುಂಬಗಳು ತೊಂದರೆಗೆ ಸಿಲುಕಿವೆ. 1.78 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮವಾಗಿ ಹೈ ಅಲರ್ಟ್ ಘೋಷಣೆ ಮಾಡಿವೆ. ಇನ್ನೂ 3 ದಿನಗಳ ಕಾಲ ಚಂಡಮಾರುತದ ಅಬ್ಬರ ಇರುತ್ತದೆ ಎನ್ನಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ. ಚಂಡಮಾರುತದಿಂದ ಮತ್ತಷ್ಟು ಹಾನಿ ಸಂಭವಿಸಬಹುದೆಂದು ರಾಜ್ಯ ಸರ್ಕಾರಗಳು ಈಗಾಗಲೇ ಮುನ್ನೆಚ್ಚರಿಕೆ ವಹಿಸಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪುರಿ, ಜಗತ್ ಸಿಂಗ್ ಪುರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 