ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಬಿಡಲಾಗಿದೆ : ಅಶೋಕ್ ಪಟ್ಟಣ್
ಬೆಂಗಳೂರು, ಆ 9 ಮಹಾರಾಷ್ಟ್ರದಿಂದ ಬೆಳಗಾವಿಗೆ ಈ ಬಾರಿ 1 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ತಾಲೂಕಿನಲ್ಲಿ ಬಹಳಷ್ಟು ಹಾನಿಯುಂಟಾಗಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಅಶೋಕ್ ಪಟ್ಟಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ 4 ರಿಂದ 10 ಟಿಎಂಸಿ ನೀರು ಬಿಡಲಾಗುತ್ತಿತ್ತು. ಆದರೆ ಈ ಬಾರಿ ಹೆಚ್ಚು ನೀರು ಬಿಡಲಾಗಿದೆ. ರಾಮದುರ್ಗದಲ್ಲಿ ಮಳೆ ತುಂಬಾ ಹೆಚ್ಚಾಗಿತ್ತು. ಇಂತಹ ಸಂದರ್ಭದಲ್ಲಿ ಹೆಚ್ಚಿನ ನೀರು ಬಿಟ್ಟ ಪರಿಣಾಮ ಜನರಿಗೆ ತೊಂದರೆಯಾಗಿದೆ ಎಂದರು.
ಈಗಾಗಲೇ ನಾಲೆ ಅಗಲೀಕರಣ ಮಾಡಿರುವುದರಿಂದ ಹೆಚ್ಚಿನ ತೊಂದರೆಯಾಗುವುದು ತಪ್ಪಿದೆ.
ಹಲವಾರು ಕಡೆ ಗಂಜಿಕೇಂದ್ರ ತೆರೆದಿದ್ದಾರೆ. ತಾವು ನಾಲ್ಕು ದಿನಗಳಿಂದ ಗಲಾಟೆ ಮಾಡಿದ್ದರಿಂದ ಗುರುವಾರ ಏಪ್ ಲಿಫ್ಟ್ ಮಾಡಿದ್ದಾರೆ. ಹಲವಾರು ಜನರು ದೇವಸ್ಥಾನ, ಮರಗಳ ಮೇಲೆ ಇದ್ದಾರೆ. ಹಳ್ಳಿಗಳಿಗೆ ತುಂಬಿರುವ ನೀರು ತೆರವಾಗಲೂ ಇನ್ನೂ ಒಂದು ವಾರ ಬೇಕು ಎಂದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 