ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಬಿಡಲಾಗಿದೆ : ಅಶೋಕ್ ಪಟ್ಟಣ್
ಬೆಂಗಳೂರು, ಆ 9 ಮಹಾರಾಷ್ಟ್ರದಿಂದ ಬೆಳಗಾವಿಗೆ ಈ ಬಾರಿ 1 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ತಾಲೂಕಿನಲ್ಲಿ ಬಹಳಷ್ಟು ಹಾನಿಯುಂಟಾಗಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಅಶೋಕ್ ಪಟ್ಟಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ 4 ರಿಂದ 10 ಟಿಎಂಸಿ ನೀರು ಬಿಡಲಾಗುತ್ತಿತ್ತು. ಆದರೆ ಈ ಬಾರಿ ಹೆಚ್ಚು ನೀರು ಬಿಡಲಾಗಿದೆ. ರಾಮದುರ್ಗದಲ್ಲಿ ಮಳೆ ತುಂಬಾ ಹೆಚ್ಚಾಗಿತ್ತು. ಇಂತಹ ಸಂದರ್ಭದಲ್ಲಿ ಹೆಚ್ಚಿನ ನೀರು ಬಿಟ್ಟ ಪರಿಣಾಮ ಜನರಿಗೆ ತೊಂದರೆಯಾಗಿದೆ ಎಂದರು.
ಈಗಾಗಲೇ ನಾಲೆ ಅಗಲೀಕರಣ ಮಾಡಿರುವುದರಿಂದ ಹೆಚ್ಚಿನ ತೊಂದರೆಯಾಗುವುದು ತಪ್ಪಿದೆ.
ಹಲವಾರು ಕಡೆ ಗಂಜಿಕೇಂದ್ರ ತೆರೆದಿದ್ದಾರೆ. ತಾವು ನಾಲ್ಕು ದಿನಗಳಿಂದ ಗಲಾಟೆ ಮಾಡಿದ್ದರಿಂದ ಗುರುವಾರ ಏಪ್ ಲಿಫ್ಟ್ ಮಾಡಿದ್ದಾರೆ. ಹಲವಾರು ಜನರು ದೇವಸ್ಥಾನ, ಮರಗಳ ಮೇಲೆ ಇದ್ದಾರೆ. ಹಳ್ಳಿಗಳಿಗೆ ತುಂಬಿರುವ ನೀರು ತೆರವಾಗಲೂ ಇನ್ನೂ ಒಂದು ವಾರ ಬೇಕು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 