ಮುದ್ದೇಬಿಹಾಳ: ಕೋರ್ಟ ಕಲಾಪ ಬಹಿಷ್ಕರಿಸಿ ಸರ್ಕಾರಕ್ಕೆ ಮನವಿ
ಮುದ್ದೇಬಿಹಾಳ 29: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಯವಾದಿಗಳ ಸಂಘದ ಸದಸ್ಯರಾಗಿದ್ದ ಸತೀಶ ಅವರ ಬರ್ಬರ ಹತ್ಯೆ ಖಂಡಿಸಿ ಇಲ್ಲಿನ ನ್ಯಾಯವಾದಿಗಳ ಸಂಘದ ಸದಸ್ಯರು ನ್ಯಾಯಾಲಯದ ಕಾರ್ಯ ಕಲಾಪದಿಂದ ದೂರ ಉಳಿದು ಪ್ರತಿಭಟಿಸಿದ ಘಟನೆ ಬುಧವಾರ ಇಲ್ಲಿ ನಡೆದಿದೆ.
ಇಲ್ಲಿನ ಹೊಸ ಕೋರ್ಟ ಕಟ್ಟಡದಲ್ಲಿರುವ ಸಂಘದಲ್ಲಿ ಸಭೆ ನಡೆಸಿದ ಎಲ್ಲ ನ್ಯಾಯವಾದಿಗಳು ಘಟನೆ ಖಂಡಿಸಿ ಕೋಟ್ ಕಲಾಪದಿಂದ ದೂರ ಉಳಿಯುವ ಠರಾವು ಸ್ವೀಕರಿಸಿದರು. ನಂತರ ಎಲ್ಲರೂ ಮಿನಿ ವಿಧಾನಸೌಧಕ್ಕೆ ತೆರಳಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಬೇಡಿಕೆಯ ಮನವಿ ಸಲ್ಲಿಸಿದರು.
ಸತೀಶರನ್ನು ಹತ್ಯೆಗೈದ ದುಷ್ಕಮರ್ಿಗಳ ವಿರುದ್ಧ ಕಠಿಣ ಕ್ರಮ ಕೈಕೊಳ್ಳಬೇಕು ಮತ್ತು ವಕೀಲರ ಸಂರಕ್ಷಣೆಗಾಗಿ ಕಾನೂನಿನಲ್ಲಿ ಸೂಕ್ತ ತಿದ್ದುಪಡಿ ಮಾಡಬೇಕು ಎಂದು ಮನವಿ ಮೂಲಕ ಸರ್ಕಾರವನ್ನು ಒತ್ತಾಯಿಸಲಾಯಿತು. ಸಂಘದ ಪ್ರಧಾನ ಕಾರ್ಯದಶರ್ಿ ಬಿ.ವೈ.ಮೇಟಿ, ವಕೀಲರಾದ ಎಸ್.ಎಂ.ಚಿಲ್ಲಾಳಶೆಟ್ಟರ, ಪಿ.ಬಿ.ಮಾತಿನ, ಎಚ್.ಎನ್.ಬಿರಾದಾರ, ಆರ್.ಎಸ್.ಬಿರಾದಾರ, ಎಂ.ಎಸ್.ಬಿರಾದಾರ, ಪಿ.ಬಿ.ಜಾಧವ, ಕೆ.ಬಿ.ದೊಡಮನಿ, ಎನ್.ಎಸ್.ಪಾಟೀಲ, ಎಂ.ಎಚ್.ಹುಗ್ಗಿ, ಬಿ.ಎ.ಚಿನಿವಾರ, ಆರ್.ಬಿ.ಕುಲಕಣರ್ಿ, ಆರ್.ಬಿ.ಪಾಟೀಲ, ಎಚ್.ಡಿ.ಅನಂತಪುರ ಮತ್ತಿತರರು ಪಾಲ್ಗೊಂಡಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 