ಸೇವಾಲಾಲ್ ಮಹಾರಾಜರ ಜನನದಿಂದ ದೊರೆತ ಮುಕ್ತಿ
ಲೋಕದರ್ಶನ ವರದಿ
ಮೂಡಲಗಿ 15: ಹರಪ್ಪ ನಾಗರೀಕತೆಯಿಂದ ಬೆಳೆದು ಬಂದು ಸಾವಿರಾರು ವರ್ಷಗಳ ಕಾಲ ಗ್ರಾಮ, ನಗರ ಜೀವನಗಳಿಂದ ದೂರವಿದ್ದು, ಅಜ್ಞಾನ, ಅಂಧಕಾರಗಳಿಂದ ಅರಣ್ಯವಾಸಿಗಳಾಗಿ ಜೀವನ ನಡೆಸುತ್ತಿದ್ದ ಜನರಿಗೆ ಸೇವಾ ಲಾಲ್ ಮಹಾರಾಜರ ಜನನದಿಂದ ಮುಕ್ತಿ ದೊರೆಯಿತು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ ಮನ್ನಿಕೇರಿ ಹೇಳಿದರು.
ಅವರು ಇಲ್ಲಿಯ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ಸೇವಾಲಾಲ್ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡಿ, ಸೇವಾಭಾಯ, ಸೇವಾಲಾಲ್ ಎಂಬ ನಾಮದೊಂದಿಗೆ ಬಡ ಜನರ ಅಜ್ಞಾನ ದೂರಮಾಡಲು ಭೀಮ ನಾಯ್ಕ ಮತ್ತು ಧರ್ಮಾಣಿ ಮಾತೆ ಎಂಬ ದಂಪತಿಗಳ ಉದರದಲ್ಲಿ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ದೈವ ಪುರುಷನ ಜನನವಾಯಿತು ಎಂದು ಮಾತನಾಡಿದರು. ಸಂಸ್ಥೆಯ ಸಂಸ್ಥಾಪಕ ಎಲ್.ವಾಯ್.ಅಡಿಹುಡಿ ಮಾತನಾಡುತ್ತಾ ಈ ದೈವ ಪುರುಷನನ್ನ ಮೋತಿವಾಲೋ ಲಾಲ್ ಮೋತಿ ಎಂದು ಕರೆಯುತ್ತಾರೆ. ಕಾರಣ ಮುಂಬಯಿಯ ಸ್ಮಿತ್ ಭಾವುಚಾ ಎಂಬ ಸ್ಥಳದಲ್ಲಿ ಹಿಂದೆ ಪೋರ್ಚುಗೀಸರ ಹಡಗು ಸಿಕ್ಕಿ ಹಾಕಿ ಕೊಂಡಿತ್ತು. ಇದನ್ನು ಸೇವಾಲಾಲ್ ತಮ್ಮ ಜಾಣತನದಿಂದ ದಡ ಸೇರಿಸಿದರು. ಅದಕ್ಕೆ ಪ್ರತಿಯಾಗಿ ಪೋರ್ಚುಗೀಸರು ಇವರಿಗೆ ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಅದಕ್ಕಾಗಿ ಇವರನ್ನು ಮೋತಿವಾಲೋ ಎಂದು ಕರೆಯುತ್ತಾರೆ ಎಂದರು. ಪ್ರಧಾನ ಗುರು ಎಸ್.ವಿ.ಸೋಮವ್ವಗೊಳ ಮಾತನಾಡಿದರು. ಕಾರ್ಯಕ್ರಮದಲ್ಲಿ, ಆರ್.ಎಲ್.ಲಮಾಣಿ ಪಿ.ಬಿ.ಚವ್ಹಾಣ ಸುನೀಲ ರಾಠೋಡ ಬಿ.ಎನ್. ಕಲ್ಡಾಪ್ಪಾಗೊಳ ಎಮ್.ಬಿ.ಇನಾಮ್ದಾರ ಹಾಗೂ ಮನೋಹರ. ಲಮಾಣಿ ಮಂಜುನಾಥ ಕುಂಬಾರ ಶಶಿಧರ ಆರಾಧ್ಯಾ ರಾಮಣ್ಣ ಮಂಟೂರ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ನೂರಾರು ಶಿಭಿರಾರ್ಥಿಗಳು ಭಾಗಿಯಾಗಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 