ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲು ಡಿಸಿಗೆ ಮುಳಜಿ ಮನವಿ

ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲು ಡಿಸಿಗೆ ಮುಳಜಿ ಮನವಿ Mulaji appeals to DC to provide more bus services

ಇಂಡಿ   06:  ದೇವರಹಿಪ್ಪರಗಿ ಮಾರ್ಗವಾಗಿ ಹೆಚ್ಚುವರಿ  ಮತ್ತು ಸರಿಯಾದ ಸಮಯಕ್ಕೆ ಬಸ್ ಓಡಿಸಲು ವಿಜಯಪುರ ಸಾರಿಗೆ ಇಲಾಖೆ ಡಿಸಿ ಅವರಾದ ಡಿ.ಎ.ಬಿರಾದಾರ ಅವರಿಗೆ ಕರವೇ(ಪ್ರವೀಣಶೆಟ್ಟಿ ಬಣ) ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರಿಂದ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದ್ದಾರೆ. ನಂತರ ಮಾತನಾಡಿ, ಇಂಡಿ - ದೇವರ ಹಿಪ್ಪರಗಿ ಎರಡು ತಾಲೂಕ ಕೇಂದ್ರಗಳಾಗಿದ್ದು ಈ ರಸ್ತೆಯು ರಾಜ್ಯ ಹೆದ್ದಾರಿ ವಾಗಿದ್ದು, ಈ ಮಾರ್ಗದಲ್ಲಿ ದಿನ ನಿತ್ಯ ಸುಮಾರು ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ, ಸಾರ್ವಜನಿಕರು, ಶಿಕ್ಷಕರು, ಸರ್ಕಾರಿ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ ಹಿಗಾಗಿ ಈ ಮಾರ್ಗದಲ್ಲಿ ಬಸ್ಸಿನ ಸಂಖ್ಯೆ ಕಡಿಮೆ ಆಗಿದ್ದು ಮತ್ತು ಸರಿಯಾದ ಸಮಯಕ್ಕೆ ಓಡುವುದಿಲ್ಲ ಹಿಗಾಗಿ ಇಲ್ಲಿನ ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದು ಕೂಡಲೇ ಹೆಚ್ಚಿನ ಬಸ್ಸಿನ ವ್ಯವಸ್ಥೆ ಮಾಡಬೇಕು ಮತ್ತು ಸರಿಯಾದ ಸಮಯಕ್ಕೆ ಓಡಿಸಬೇಕು ಎಂದು ಮನವಿ ಮಾಡಲಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಲಕಾಜಪ್ಪಸಾಹುಕಾರ ಚಂಡಕಿ, ದೇವರ ಹಿಪ್ಪರಗಿ ಕರವೇ ತಾಲೂಕು ಅಧ್ಯಕ್ಷರಾದ ರಹಿಮಾನ್ ಕನಕಲ್, ಜಾವೀದ್ ಕೊಲ್ಹಾರ ಸೇರಿದಂತೆ ಇತರರು ಇದ್ದರು.