ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲು ಡಿಸಿಗೆ ಮುಳಜಿ ಮನವಿ
Mulaji appeals to DC to provide more bus services
ಇಂಡಿ 06: ದೇವರಹಿಪ್ಪರಗಿ ಮಾರ್ಗವಾಗಿ ಹೆಚ್ಚುವರಿ ಮತ್ತು ಸರಿಯಾದ ಸಮಯಕ್ಕೆ ಬಸ್ ಓಡಿಸಲು ವಿಜಯಪುರ ಸಾರಿಗೆ ಇಲಾಖೆ ಡಿಸಿ ಅವರಾದ ಡಿ.ಎ.ಬಿರಾದಾರ ಅವರಿಗೆ ಕರವೇ(ಪ್ರವೀಣಶೆಟ್ಟಿ ಬಣ) ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರಿಂದ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದ್ದಾರೆ. ನಂತರ ಮಾತನಾಡಿ, ಇಂಡಿ - ದೇವರ ಹಿಪ್ಪರಗಿ ಎರಡು ತಾಲೂಕ ಕೇಂದ್ರಗಳಾಗಿದ್ದು ಈ ರಸ್ತೆಯು ರಾಜ್ಯ ಹೆದ್ದಾರಿ ವಾಗಿದ್ದು, ಈ ಮಾರ್ಗದಲ್ಲಿ ದಿನ ನಿತ್ಯ ಸುಮಾರು ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ, ಸಾರ್ವಜನಿಕರು, ಶಿಕ್ಷಕರು, ಸರ್ಕಾರಿ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ ಹಿಗಾಗಿ ಈ ಮಾರ್ಗದಲ್ಲಿ ಬಸ್ಸಿನ ಸಂಖ್ಯೆ ಕಡಿಮೆ ಆಗಿದ್ದು ಮತ್ತು ಸರಿಯಾದ ಸಮಯಕ್ಕೆ ಓಡುವುದಿಲ್ಲ ಹಿಗಾಗಿ ಇಲ್ಲಿನ ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದು ಕೂಡಲೇ ಹೆಚ್ಚಿನ ಬಸ್ಸಿನ ವ್ಯವಸ್ಥೆ ಮಾಡಬೇಕು ಮತ್ತು ಸರಿಯಾದ ಸಮಯಕ್ಕೆ ಓಡಿಸಬೇಕು ಎಂದು ಮನವಿ ಮಾಡಲಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಲಕಾಜಪ್ಪಸಾಹುಕಾರ ಚಂಡಕಿ, ದೇವರ ಹಿಪ್ಪರಗಿ ಕರವೇ ತಾಲೂಕು ಅಧ್ಯಕ್ಷರಾದ ರಹಿಮಾನ್ ಕನಕಲ್, ಜಾವೀದ್ ಕೊಲ್ಹಾರ ಸೇರಿದಂತೆ ಇತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 