ಭೂ ಪರಿಹಾರಕ್ಕೆ ಆಗ್ರಹಿಸಿ ಮುಂಡವಾಡ ರೈತರ ಪ್ರತಿಭಟನೆ
Mundawad farmers protest demanding land compensation
ಹೂವಿನಹಡಗಲಿ 06: ಕಾಲುವೆ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳಿಗೆ ಭೂ ಪರಿಹಾರ ನೀಡಬೇಕು ಎಂದು ಮುಂಡರಗಿ ತಾಲ್ಲೂಕು ಮುಂಡವಾಡ ಗ್ರಾಮದ ರೈತರು ಇಲ್ಲಿನ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಗೆ ಬುಧವಾರ ಮತ್ತೊಮ್ಮೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಅಂದು ಫೆ.28ರೊಳಗೆ ಪರಿಹಾರ ನೀಡುವ ಭರವಸೆಯನ್ನು ಭೂಸ್ವಾಧೀನಾಧಿಕಾರಿ ಚಿದಾನಂದ ಗುರುಸ್ವಾಮಿ ನೀಡಿದ್ದರು.ಆದರೆ ಇಲ್ಲಿವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು. ಹೂವಿನಹಡಗಲಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಮುಂದೆ ಮುಂಡರಗಿ ತಾಲ್ಲೂಕು ಮುಂಡವಾಡ ಗ್ರಾಮದ ರೈತರು ಭೂ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.ನೀಡುವವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದರು. ಸ್ಥಳದಲ್ಲೇ ಊಟ ತಯಾರಿಸಿ ಸೇವಿಸಿದರು.ರೈತ ವಿರೂಪಾಕ್ಷಪ್ಪ ಅಲ್ಲಿಪುರ ಮಾತನಾಡಿ, ಸಿಂಗಟಾಲೂರು ಯೋಜನೆ ಕಾಲುವೆಗೆ 13 ವರ್ಷಗಳ ಹಿಂದೆ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಫೆಬ್ರವರಿ ಅಂತ್ಯಕ್ಕೆ ಪರಿಹಾರ ನೀಡುವ ಭರವಸೆ ನೀಡಿದ್ದ ಅಧಿಕಾರಿ ಮಾತು ತಪ್ಪಿದ್ದಾರೆ. ಕಚೇರಿ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪರಿಹಾರ ವಿಳಂಬವಾಗಿದೆ. ರೈತರನ್ನು ಶೋಷಣೆಮಾಡಲಾಗುತ್ತಿದೆ’ ಎಂದು ಕಿಡಿಕಾರಿದರು.
ರೈತ ಸಂಗನಗೌಡ ಮಾತನಾಡಿ,, ಕಾಲುವೆಯ ಗುತ್ತಿಗೆದಾರರಿಗೆ ಎಲ್ಲ ಬಿಲ್ ಕೊಡ್ತೀರಿ, ಆದರೆ, ಭೂಮಿ ಕಳೆದುಕೊಂಡ ರೈತರನ್ನು 13 ವರ್ಷಗಳಿಂದ ಸತಾಯಿಸ್ತೀರಿ, ನಾವು ಸತ್ತ ಮೇಲೆ ಪರಿಹಾರ ಕೊಡ್ತಿರೇನು’ ಎಂದು ತರಾಟೆಗೆ ತೆಗೆದುಕೊಂಡರು.’ಉಳುಮೆಗೆ ಭೂಮಿಯೂ ಇಲ್ಲ, ಪರಿಹಾರವೂ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಸ್ಥಳಕ್ಕೆ ಭೇಟಿ ನೀಡಿದ ಭೂಸ್ವಾಧೀನಾಧಿಕಾರಿ ಚಿದಾನಂದ ಗುರುಸ್ವಾಮಿ ಮಾರ್ಚ್ ನಲ್ಲಿ ಪರಿಹಾರ ಕೊಡುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ಕ್ಯೆ ಬಿಟ್ಟರು.ತಹಶಿಲ್ದಾರರ ಸಂತೋಷ ಕುಮಾರ.ಸಿಪಿಐ ದೀಪಕ್ ಭೂಸರೆಡ್ಡಿ.ಪಿಎಸ್ಐ ವಿಜಯ ಕ್ರಷ್ಣ.ರಾಜೇಂದ್ರ ನಾಯ್ಕ.ವಾಸು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 