ನಗರಸಭೆ ಅಧಿಕಾರಿಗಳ ದಾಳಿ: ನಿಷೇಧಿತ 85 ಕೆ.ಜಿ. ಪ್ಲಾಸ್ಟಿಕ್ ವಶ
ಕೊಪ್ಪಳ: ಕೊಪ್ಪಳ ನಗರಸಭೆ ವತಿಯಿಂದ ನಗರದ ಜೆ.ಪಿ. ಮಾಕರ್ೆಟ್ ಬಳಿಯ ವಾಣಿಜ್ಯ ಮಳಿಗೆಗಳಿಗೆ ಮಂಗಳವಾರದಂದು ದಾಳಿ ನಡೆಸಿದ್ದು, ಸುಮರು 85 ಕೆ.ಜಿ. ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.
ಈಗಾಗಲೆ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ಅನ್ನು ಬಳಸದಂತೆ ಹಾಗೂ ಮಾರಾಟ ಮಾಡದಂತೆ ಸಾಕಷ್ಟು ಜನ ಜಾಗೃತಿ ಮೂಡಿಸಲಾಗುತ್ತಿದೆ. ಆದಾಗ್ಯೂ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವುದು ಕಂಡುಬರುತ್ತಿದ್ದು, ಹೀಗಾಗಿ ನಗರಸಭೆ ವತಿಯಿಂದ ಮಂಗಳವಾರದಂದು ನಗರದ ಜೆಪಿ ಮಾಕರ್ೆಟ್ ಬಳಿಯ ವಾಣಿಜ್ಯ ಮಳಿಗೆಗಳಿಗೆ ದಾಳಿ ನಡೆಸಲಾಯಿತು. ಇಲ್ಲಿನ ಆರ್.ಆರ್. ಜನರಲ್ ಸ್ಟೋಸರ್್ ನಿಂದ 85 ಕೆ.ಜಿ. ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಯಿತು. ನಗರಸಭೆ ಪೌರಾಯುಕ್ತ ಸುನೀಲ್ ಪಾಟೀಲ್, ಪರಿಸರ ಅಭಿಯಂತರ ಅಶೋಕ್ಕುಮಾರ್, ನಗರಸಭೆ ವ್ಯವಸ್ಥಾಪಕ ಮಂಜುನಾಥ ಬೆಲ್ಲದ, ರಾಘವೇಂದ್ರ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 