ಪಶ್ಚಿಮ ಬಂಗಾಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ
ನವದೆಹಲಿ, ಅ 10: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಗುರುವಾರ ವಾಗ್ದಾಳಿ ನಡೆಸಿದೆ. ದೀದಿ ನಿಮ್ಮ ರಾಜ್ಯದಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗ್ಯ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ. ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಣಿ ಪತ್ನಿ ಹಾಗೂ 8 ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ. ಇದಕ್ಕಿಂತ ಹೀನಾಯ ಕೃತ್ಯ ನಡೆಯಬೇಕೆ? ಎಂದು ವಿಜಯ ವರ್ಗಿಯ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂದಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ಪ್ರಕಾಶ್ ಪಾಲ್ ಮತ್ತು ಅವರ ಪತ್ನಿ, ಪುತ್ರನನ್ನು ಹರಿತವಾದ ಆಯುಧದಿಂದ ಇರಿದು ಕೊಂದಿದ್ದಾರೆ. ಈ ಘಟನೆಯ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 