ಪೌರತ್ವ ಕಾಯ್ದೆಯಿಂದ ಮುಸ್ಲಿಂ ರಿಗೆ ತೊಂದರೆಯಿಲ್ಲ: ಶಾಹಿ ಇಮಾಮ್ ಬುಖಾರಿ
ನವದೆಹಲಿ, ಡಿ 18ಕೇಂದ್ರದ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಂ ಸಮುದಾಯ ಯಾವುದೇ ರೀತಿಯ ಆತಂಕ, ತೊಂದರೆ, ಭಯ
ಪಡುವ ಅವಶ್ಯಕತೆಯಿಲ್ಲ ಎಂದು ದಿಲ್ಲಿಯ ಜಾಮಾ
ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯ ಪಟ್ಟಿದ್ದಾರೆ.ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟನೆ ಜನರ ಹಕ್ಕು
ಎಂದ ಅವರು, ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ,
ಹಿಂಸಾಚಾರ ವ್ಯಾಪಿಸಿರುವಾಗ ಶಾಹಿ ಇಮಾಮ್ ಅವರ ಈ ಹೇಳಿಕೆಗೆ ರಾಜಕೀಯವಾಗಿಯೂ ಬಹಳ ಮಹತ್ವ ಬಂದಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು ನಿಜ, ಯಾರೊಬ್ಬರು
ಅದನ್ನು ತಡೆಯಲು ಸಾಧ್ಯವಿಲ್ಲ. ಆದರೆ ಅದನ್ನು ನಿಯಂತ್ರಿಸುವುದು
ಸಹ ಮುಖ್ಯವಾಗಿದೆ. ಭಾವುಕತೆ, ಭಾವನೆಯನ್ನು ನಮ್ಮ ಹಿಡಿತದಲ್ಲಿಟ್ಟುಕೊಳ್ಳುವುದು
ಕೂಡಾ ಅಷ್ಟೇ ಮುಖ್ಯ ಎಂದು ಇಮಾಮ್ ಸೈಯದ್ ಅಹ್ಮದ್ ಬುಖಾರಿ ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿಡಿಯೋವನ್ನು ಖಾಸಗಿ ಟಿವಿವಾಹಿನಿಯೊಂದು ಪ್ರಸಾರ
ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 