ಅನಾರೋಗ್ಯ ಹಿನ್ನೆಲೆ: ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುತ್ತಪ್ಪ ರೈ
ಬೆಂಗಳೂರು, ಜ.20 : ಕ್ಯಾನ್ಸರ್ ರೋಗದಿಂದ ಬಳಲುತ್ತಿರುವುದರಿಂದ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ ಎಂದು ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ತಿಳಿಸಿದ್ದಾರೆ.
ತಮ್ಮ ಅನಾರೋಗ್ಯದ ಕುರಿತು ಎದ್ದಿರುವ ಅನುಮಾನಗಳ ಬಗ್ಗೆ ಸೋಮವಾರ ಬಿಡದಿ ಬಳಿಯ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವರ್ಷದ ಹಿಂದೆ ಕುಕ್ಕೆಗೆ ಹೋಗುವ ಸಂದರ್ಭದಲ್ಲಿ ಬೆನ್ನು ನೋವು ಕಾಣಿಸಿಕೊಂಡಿತು. ನಂತರದಲ್ಲಿ ಪರೀಕ್ಷೆ ಮಾಡಿದಾಗ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ನಂತರ ದೆಹಲಿಯ ಮ್ಯಾಕ್ಸ್, ಚೆನ್ಮೈನ ಅಪೋಲೊ , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ.ಶೇ.90ರಷ್ಟು ಗುಣ ಆಗಿರುವುದಾಗಿ ವೈದ್ಯರು ಹೇಳಿದರು. ಆದರೆ ನಂತರದಲ್ಲಿ ಮಿದುಳಿಗೆ ಕ್ಯಾನ್ಸರ್ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕುವುದಾಗಿ ವೈದ್ಯರು ಹೇಳಿದರು. ಹೀಗಾಗಿ ಬಿಡದಿಗೆ ವಾಪಸ್ ಆಗಿದ್ದೇನೆ. ನನಗೀಗ 68 ವರ್ಷ. ಐದು ಗುಂಡು ಬಿದ್ದರೂ ಬದುಕಿದವನು. ಸಾವಿಗೆ ಹೆದರುವುದಿಲ್ಲ. ವಿಲ್ ಪವರ್ನಿಂದ ಬದುಕುತ್ತಿದ್ದೇನೆ. ಸಮಾಜ ಸೇವೆ ಮುಂದುವರಿಸುತ್ತೇನೆ’ ಎಂದು ತಿಳಿಸಿದರು
‘ವರ್ಷಕ್ಕೆ 20ರಿಂದ 30 ಕೋಟಿ ರೂ. ತೆರಿಗೆ ಕಟ್ಟುತ್ತಿದ್ದೇನೆ. ಆಸ್ತಿ ಕುರಿತು ಈಗಾಗಲೇ ವಿಲ್ ಮಾಡಿಸಿದ್ದು, ಮಕ್ಕಳಿಗೂ ತಿಳಿಸಿದ್ದೇನೆ. ಕಳೆದ 15-20 ವರ್ಷಗಳಿಂದ ನನ್ನ ಜೊತೆಗಿರುವವರಿಗೆ ಒಂದೊಂದು ನಿವೇಶನ ಕೊಡುವಂತೆ ತಿಳಿಸಿದ್ದೇನೆ ಎಂದು ವಿವರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 