ಮೈಸೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ 2ನೇ ದರ್ಜೆಯ ಸಮಾಜ ಕಲ್ಯಾಣ ಇಲಾಖೆ ನೌಕರ
ಮೈಸೂರು, ಜೂನ್ 02, ಕರ್ನಾಟಕ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಲಂಚ ತೆಗೆದುಕೊಳ್ಳುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಶಿವಣ್ಣ ಎಂದು ಗುರುತಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮುನಿರಾಜು ಅವರು ಹಾಸ್ಟೆಲ್ ಪರಿಶೀಲನೆ ಮಾಡುವುದನ್ನು ತಡೆಯಲು ಅವರು ಪಿರಿಯಾಪಟ್ಟಣದ ರಾವಂದೂರು ಹಾಸ್ಟೆಲ್ ವಾರ್ಡನ್ ಹೆಚ್.ರಾಜಯ್ಯರಿಂದ 1.5 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಹಾಗೂ ಈ ಸಂಬಂಧ ರಾಜಯ್ಯ ಅವರಿಂದ 50 ಸಾವಿರ ರೂ.ಗಳ ಮುಂಗಡವನ್ನು ಪಡೆದಿದ್ದರು. ನಂತರ ಮುನಿರಾಜು ಮತ್ತು ಶಿವಣ್ಣ ವಿರುದ್ಧ ರಾಜಯ್ಯ ಎಸಿಬಿಗೆ ದೂರು ನೀಡಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 