ಮೈಸೂರು: ಯಡವಟ್ಟು ಎಂದರೆ ಬಿಎಸ್ವೈ: ವಾಟಾಳ್ ನಾಗರಾಜ್
ಮೈಸೂರು 17: ಪಕ್ಷಾಂತರಿಗಳು ಪ್ರಜಾಪ್ರಭುತ್ವನ್ನು ಹಾಳುಮಾಡುತ್ತಿದ್ದು, ಅಂತಹವರಿಗೆ ಮತದಾರರು ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದರು.
ನಗರದ ರೈಲ್ವೆ ನಿಲ್ದಾಣ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಪಕ್ಷಾಂತರ ಮಾಡಿರುವ ಅನರ್ಹ ಶಾಸಕರು ಜೈಲಿನಲ್ಲಿ ಇರಬೇಕು. ಅವರು ಮತ್ತೆ ಶಾಸನ ಸಭೆಗೆ ಆರಿಸಿ ಬರಬಾರದು. ಇಂತಹವರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಉಪಚುನಾವಣೆಯಲ್ಲಿ ಇವರ್ಯಾರಿಗೂ ಮತಹಾಕಬಾರದೆಂದು ಮನವಿ ಮಾಡಿದರು.
ಯಡವಟ್ಟು ಎಂದರೆ ಯಡಿಯೂರಪ್ಪ, ಯಡಿಯೂರಪ್ಪ ಎಂದರೆ ಯಡವಟ್ಟು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವ್ಯವಸ್ಥೆಯನ್ನು ಸರಿಪಡಿಸಲು ನಾನು ಶಾಸಕನಾಗಬೇಕು. ಅದಕ್ಕಾಗಿ ಸ್ಪರ್ದೇಸಿದ್ದೇನೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 