ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ
ಚಂಡೀಗಢ, ಫೆ 2, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ತವರು ನಗರವಾದ ಪಾಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.ಪಂಜಾಬ್ ರಾಜ್ಯ ವಿದ್ಯುತ್ ಕಾರ್ಪೋರೇಷನ್ ಲಿಮಿಟೆಡ್ನ ಉದ್ಯೋಗಿಗಳಾಗಿರುವ ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ.
ಉಪಾಹಾರ ಗೃಹದಲ್ಲಿ ಮೃತರು, ಹಾಗೂ ಮನೋಜ್ ಕುಮಾರ್ ಮತ್ತು ಅವರ ಮಗನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ತಂದೆ ಮಗ ಸೇರಿಕೊಂಡು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಅವರನ್ನು ಥಳಿಸಿದ್ದಾರೆ.ಈ ಘಟನೆಯ ಬಳಿಕ ಆಕ್ರೋಶಗೊಂಡ ಮನೋಜ್, ಮನೆಗೆ ತೆರಳಿ ರೈಫಲ್ ತಂದು ಅರ್ಮಿಕ್ ಸಿಂಗ್ ಹಾಗೂ ಸಿಮ್ರಾನ್ಜಿತ್ ಸಿಂಗ್ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಐಪಿಸಿ ಸೆಕ್ಷನ್ 302ರ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 