ನರೇಗಾ ಹಾಗೂ ಪಂ.ರಾ ಪ್ರಗತಿ ಪರೀಶೀಲನಾ ಸಭೆ
NREGA and P.R.A progress review meeting
ದೇವರ ಹಿಪ್ಪರಗಿ 15: ಪಟ್ಟಣದ ತಾಲೂಕ ಪಂಚಾಯಿತಿಯಲ್ಲಿ ಶುಕ್ರವಾರದಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಾರತಿ ಚಲುವಯ್ಯ ರವರ ಅಧ್ಯಕ್ಷತೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಹಾಗೂ ಪಂಚಾಯತ ರಾಜ ಇಲಾಖೆಯ ವಿವಿಧ ವಿಷಯಗಳ ಕುರಿತು ಪ್ರಗತಿ ಪರೀಶೀಲನಾ ಸಭೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಮೂನೆ-6 ಮೂಲಕ ಕೆಲಸದ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಕೂಲಿಕಾರರಿಗೂ ಕಡ್ಡಾಯವಾಗಿ ಕೆಲಸ ಒದಗಿಸಬೇಕು ಎಂದು ಪಿಡಿಓ ರವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಯಲ್ಲಿ ಜಿ. ಕೆ. ಎಂ. ಟಿ ಆರ್ ಎಂ, ಬಿ ಎಫ್ ಟಿ ಮನೆಮನೆಗೆ ತೆರಳಿ ನಮೂನೆ-6 ಕೆಲಸದ ಬೇಡಿಕೆ ಸ್ವೀಕರಿಸಿ, ಕೂಲಿಕಾರರಿಗೆ ಯೋಜನೆಯ ಸೌಲಭ್ಯ ತಲುಪುವಂತೆ ಕ್ರಮ ವಹಿಸಬೇಕು ಹಾಗೂ ಇದೇ ವೇಳೆ ಇ-ಕೆವೈಸಿ ಪ್ರಗತಿಯನ್ನು ಶೇ.100ಕ್ಕೆ ತಲುಪಿಸುವಂತೆ ಸೂಚಿಸಿದರು, ಗುರಿ ಸಾಧನೆಯಲ್ಲಿ ನಿರ್ಲಕ್ಷ್ಯ ತೋರಿದ ಜಿ.ಕೆ.ಎಂ, ಟಿ.ಆರ್.ಎಂ ಹಾಗೂ ಬಿ.ಎಫ್.ಟಿ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಾಕ್ಸ್ ಸಭೆಯಲ್ಲಿ ಲೇಬರ್ ಎಂಗೇಜ್ ಹೆಚ್ಚಿಸುವುದು, ಜೀರೋ ಎನ್ಎಂಆರ್ ತಡೆಗಟ್ಟುವುದು, ಮಾನವ ದಿನಗಳ ಸೃಜನೆ, ಪೇಸ್ ಅಥೆಂಟಿಕೇಶನ್ ಪ್ರಗತಿ, ಯುಕ್ತಧಾರದಲ್ಲಿ ವರ್ಕ್ ಎಂಟ್ರಿ, ಕಾಮಗಾರಿಗಳ ಪೂರ್ಣಗೊಳಿಸುವುದು ಬಾಕಿ ಕೂಲಿ ಪಾವತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸವಿಸ್ತಾರ ಚರ್ಚೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ನರೆಗಾ ಸಹಾಯಕ ನಿರ್ದೇಶಕರಾದ ಶಾಂತಗೌಡ ನ್ಯಾಮಣ್ಣವರ, ಪಂ.ರಾ ಸಹಾಯಕ ನಿರ್ದೇಶಕರಾದ ಶಿವಾನಂದ ಮೂಲಿಮನಿ, ತಾಂತ್ರಿಕ ಸಂಯೋಜಕರಾದ ಶರಣಗೌಡ ಪಾಟೀಲ, ತಾಂತ್ರಿಕ ಸಹಾಯಕರಾದ ಸೊಹೇಬ ಮಾರಡಗಿ, ಅರ್ಷದ್ ಕೋಟ್ಯಾಳ, ಗ್ರಾಪಂ. ಪಿಡಿಓ ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಆಡಳಿತ ಸಹಾಯಕ ಪವನ ಜೋಶಿ, ತಾಪಂ. ಕಂಪ್ಯೂಟರ್ ಸಿಬ್ಬಂದಿ ಕಿರಣ ಪಾಟೀಲ್, ಕಂಪ್ಯೂಟರ್ ಆಪರೇಟರ್ಗಳು, ಜಿ.ಕೆ.ಎಂ, ಬಿ.ಎಫ್.ಟಿ, ಟಿ.ಆರ್.ಎಂ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 