ಹರಗಿನಡೋಣಿಯಲ್ಲಿ ಎನ್ಎಸ್ಎಸ್ ಸಪ್ತಾಹ ಆಚರಣೆ
NSS Week Celebration in Haraginadoni
ಬಳ್ಳಾರಿ 08: ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಾ ಯೋಜನೆ (ಎನ್ಎಸ್ಎಸ್) ಸಪ್ತಾಹವನ್ನು ಹರಗಿನಡೋಣಿ ಗ್ರಾಮದ ಶ್ರೀ ಬುಗ್ಗ ಸಿದ್ದಲಿಂಗೇಶ್ವರ ಶಾಲೆಯಲ್ಲಿ ಉದ್ಘಾಟಿಸಲಾಯಿತು.ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಎಚ್.ಎಸ್.ಕೆ. ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಶಾಲೆಯ ಶಿಕ್ಷಕಿ ಶ್ರೀಮತಿ ನಿರ್ಮಲಾ ಹಾಗೂ ಸಹ ಶಿಕ್ಷಕರು, ಗ್ರಾಮಸ್ಥ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸಹನೆ ಮತ್ತು ಸತ್ಯದ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆಯ ಮಹತ್ವವನ್ನು ಅರಿತು ಸಮಾಜದಲ್ಲಿ ಉತ್ತಮ ಸಂದೇಶವನ್ನು ಹರಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ನಿರೂಪಣೆಯನ್ನು ಎಚ್.ಎಸ್.ಕೆ. ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ರಾಜೇಶ್ ಕುಮಾರ್ ಜೆ.ಎಂ ಅವರು ನಡೆಸಿಕೊಟ್ಟರು. ವಂದನಾರೆ್ಣಯನ್ನು ಸಮನ್ವಯ ಅಧಿಕಾರಿ ಕೆ. ಪಂಪನಗೌಡರು ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 