ಮೈಸೂರು ದಸರಾ ಕವಿಗೋಷ್ಠಿಗೆ ನಾಗೇಶ್ ನಾಯಕ
ಲೋಕದರ್ಶನ ವರದಿ
ಬೈಲಹೊಂಗಲ 10: ತಾಲೂಕಿನ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಶಿಕ್ಷಕ, ಕವಿ ನಾಗೇಶ್ ಜೆ. ನಾಯಕ ಮೈಸೂರು ದಸರಾದಲ್ಲಿ ನಡೆಯುವ ಯುವ ಕವಿಗೋಷ್ಠಿಗೆ ಬೆಳಗಾವಿ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. 13. ಶನಿವಾರದಂದು 10-30 ಕ್ಕೆ ಮೈಸೂರಿನ ರಾಣಿ ಬಹಾದ್ದೂರ ಅಡಿಟೋರಿಯಮ್ನಲ್ಲಿ ಖ್ಯಾತ ಕವಯಿತ್ರಿ ಕೆ. ಷರೀಫಾ ಉದ್ಘಾಟಿಸಲಿರುವ ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲಿದ್ದಾರೆ. ನಾಗೇಶ್ ನಾಯಕ ಈಗಾಗಲೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಕಿತ್ತೂರು ಉತ್ಸವ, ರನ್ನ ಉತ್ಸವ, ಹಂಪಿ ಉತ್ಸವ, ಬೀದರ ಉತ್ಸವ, ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಕವಿತೆ ವಾಚನ ಮಾಡಿ ಕಾವ್ಯ ಪ್ರತಿಭೆ ಮೆರೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 