ಬಟ್ಟೂರು ಗ್ರಾಮ ಪಂಚಾಯತಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಣೆ
Nalwadi Krishnaraja Wodeyar Jayanti Celebrations at Battur Gram Panchayat
ಲಕ್ಷ್ಮೇಶ್ವರ 04: ತಾಲೂಕಿನ ಬಟ್ಟೂರು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗುರುವಾರಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ಲಮಾಣಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಾರೆ್ಪಣ ಮಾಡುವುದರೊಂದಿಗೆ ಜಯಂತಿಯನ್ನು ಆಚರಿಸಿದರು ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಆಚರಿಸಿ ಮಾತನಾಡಿದ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ಲಮಾಣಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರುನಾಡಿನ ಜನತೆಗೆ ತಮ್ಮ ಮೈಸೂರು ರಾಜ್ಯ ಆಡಳಿತದ ಅವಧಿಯಲ್ಲಿ ಸಾಕಷ್ಟು ಕೊಡುಗೆಗಳನ್ನು ನೀಡಿ ಹೋಗಿದ್ದಾರೆ.
ಮಹಿಳೆಯರಿಗೆ ಕಡ್ಡಾಯ ಶಿಕ್ಷಣ ತಂದೆಯ ಆಸ್ತಿಯಲ್ಲಿ ಹಕ್ಕು ಮತದಾನದ ಹಕ್ಕು ವಿಧವಿಯರಿಗೆ ಮರು ವಿವಾಹ ದೇವದಾಸಿ ಪದ್ಧತಿ ನಿಷೇಧ ಸೇರಿದಂತೆ ಅನೇಕ ಕಾಯ್ದೆಗಳನ್ನು ಜಾರಿಗೊಳಿಸಿದ್ದಲ್ಲದೆ ಆಧುನಿಕ ಮೈಸೂರಿನ ರೂವಾರಿ ಕನ್ನಂಬಾಡೆ ಅಣೆಕಟ್ಟನ್ನು ಕಟ್ಟಿ ಕನ್ನಡಿಗರ ಕಂಬನಿಯನ್ನು ವರಿಸಿದ ದೇವತಾ ಮನುಷ್ಯ ಪ್ರಜಾ ಸೇವಕ ರಾಜ್ಯರ್ಷಿ ಈ ನಾಲ್ವಡಿ ಕೃಷ್ಣರಾಜ ಒಡೆಯರು ಅವರ ಕೊಡುಗೆ ಅಪಾರ ಅಂತಾ ಮಹಾರಾಜರನ್ನು ಎಲ್ಲರೂ ಅವರ ಜಯಂತಿ ಆಚರಣೆ ಮಾಡುವುದರೊಂದಿಗೆ ಸ್ಮರಿಸೋಣ ಎಂದರು ಈ ಸಮಯದಲ್ಲಿ ಪಂಚಾಯಿತಿಯ ಸಿಬ್ಬಂದಿಗಳಾದ ಯಲ್ಲಪ್ಪ ನಡಿವಿನಕೆರಿ ಮಾಂತೇಶ ಮಾಡಳ್ಳಿ ಬಸವರಾಜ ತಳವಾರ ಹಾಲೇಶ್ ಪಾಟೀಲ ರವಿ ತಳವಾರ ಗಂಗಮ್ಮ ಹರಿಜನ ಸೇರಿದಂತೆ ಇನ್ನೂ ಅನೇಕ ಗ್ರಾಮದ ಮುಖಂಡರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 