ಆಯನೂರಿನ ಮಸೀದಿಯಲ್ಲಿ ನಮಾಜ್: ಏಳು ಮಂದಿಗೆ ಜ್ವರ ಪತ್ತೆ
ಶಿವಮೊಗ್ಗ, ಏ 3,ಲಾಕ್ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಜಮಾಜ್ಗೆ ಒಟ್ಟು ಸೇರಿದ್ದ 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ. ನಮಾಜ್’ನಲ್ಲಿ ಭಾಗಿಯಾದವರ ಪೈಕಿ ಏಳು ಮಂದಿಯಲ್ಲಿ ಜ್ವರದ ಲಕ್ಷಣ ಇರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರದ ನಮಾಜ್ ಮಾಡಲು 70ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಎಂಬುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.ಏಳು ಮಂದಿಯನ್ನು ಕೂಡಲೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಉಳಿದ 70 ಮಂದಿಯನ್ನು ಸಮೀಪದ ಶಾಲೆಯೊಂದರ ಕಟ್ಟಡದಲ್ಲಿ ಕ್ವಾರಂಟೈನ್ ವಿಭಾಗದಲ್ಲಿ ಇರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಕುಂಸಿ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 