ಆಯನೂರಿನ ಮಸೀದಿಯಲ್ಲಿ ನಮಾಜ್: ಏಳು ಮಂದಿಗೆ ಜ್ವರ ಪತ್ತೆ
ಶಿವಮೊಗ್ಗ, ಏ 3,ಲಾಕ್ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಜಮಾಜ್ಗೆ ಒಟ್ಟು ಸೇರಿದ್ದ 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ. ನಮಾಜ್’ನಲ್ಲಿ ಭಾಗಿಯಾದವರ ಪೈಕಿ ಏಳು ಮಂದಿಯಲ್ಲಿ ಜ್ವರದ ಲಕ್ಷಣ ಇರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರದ ನಮಾಜ್ ಮಾಡಲು 70ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ ಎಂಬುದಾಗಿ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.ಏಳು ಮಂದಿಯನ್ನು ಕೂಡಲೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಉಳಿದ 70 ಮಂದಿಯನ್ನು ಸಮೀಪದ ಶಾಲೆಯೊಂದರ ಕಟ್ಟಡದಲ್ಲಿ ಕ್ವಾರಂಟೈನ್ ವಿಭಾಗದಲ್ಲಿ ಇರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಕುಂಸಿ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 