ನಾರಿ-ಕಿಲ್ಪ್ ಯೋಜನೆ: ಮಹಿಳಾ ಗಣತಿದಾರರಿಗೆ ತರಬೇತಿ
Nari-Kilp Scheme: Training for women enumerators
ಬಳ್ಳಾರಿ 17: ಕಡು ಬಡತನದ ಕುಟುಂಬಗಳಿಗೆ ಸರ್ಕಾರದ ಯೋಜನೆಗಳ ಮಾಹಿತಿ ನೀಡಿ ಅವರ ಜೀವನೋಪಾಯವನ್ನು ಸುಧಾರಿಸಿ ಬಡತನದಿಂದ ಹೊರಬರುವಂತೆ ಮಾಡುವುದು ನಾರಿ-ಕಿಲ್ಪ್ ಯೋಜನೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಜೀವಿನಿ-ಕೆಎಸ್ಆರ್ಎಲ್ಪಿಎಸ್ ಅಭಿಯಾನದಡಿ ನಾರಿ-ಕಿಲ್ಪ್ ಯೋಜನೆಯ ಕುರಿತು ಸ್ವಸಹಾಯ ಗುಂಪಿನ ಮಹಿಳೆಯರಿಗೆ ಜಿಲ್ಲಾ ಪಂಚಾಯತ್ನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾರಿ-ಕಿಲ್ಪ್ ಕಾರ್ಯಕ್ರಮವನ್ನು ಮೊದಲ ಹಂತದಲ್ಲಿ ಜಿಲ್ಲೆಯ 2 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಲ್ಲಿ ಅತೀ ಬಡವರನ್ನು ಗುರಿಯಾಗಿಸಿ, ಅಂತಹ ಕುಟುಂಬಗಳ ಗುರುತಿಸುವಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು (ಪಿಆರ್ಎ ಮನೆ-ಮನೆ ಸಮೀಕ್ಷೆ) ಕೈಗೊಳ್ಳಲು ಪ್ರತಿ ಗ್ರಾಮ ಪಂಚಾಯತಿಗೆ ಇಬ್ಬರಂತೆ ಸ್ವ-ಸಹಾಯ ಸಂಘದ ಸದಸ್ಯರನ್ನು ಆಯ್ಕೆ ಮಾಡಿ ಅವರಿಗೆ 4 ದಿನಗಳ ಕ್ಷೇತ್ರ ಭೇಟಿ ಒಳಗೊಂಡಂತೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಕಡುಬಡತನದ ಕುರಿತು ಸರಿಯಾದ ಕ್ರಮದಲ್ಲಿ ಮಹಿಳಾ ಸಮೀಕ್ಷೆದಾರರು ತರಬೇತಿ ಪಡೆದು ಅತ್ಯಂತ ದುರ್ಬಲ ಕುಟುಂಬಗಳ ಸಮೀಕ್ಷೆ ಮಾಡಿ ಸರ್ಕಾರಕ್ಕೆ ಮಾಹಿತಿ ನೀಡಿದರೆ ನಾರಿ-ಕಿಲ್ಪ್ ಯೋಜನೆಯ ಅನುಷ್ಠಾನ ಪ್ರಯೋಜನವಾಗುವುದು ಎಂದು ಮಹಿಳಾ ತರಬೇತಿ ಗಣತಿದಾರರಿಗೆ ತಿಳಿಸಿದರು.
ಜಿಲ್ಲೆಯ 2 ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯತಿಯಿಂದ ಇಬ್ಬರಂತೆ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.
ನಾರಿ-ಕಿಲ್ಪ್ನ ಡಿಆರ್ಡಿಎ ಯೋಜನಾ ನಿರ್ದೇಶಕರು ಯೋಜನೆಯ ಉದ್ದೇಶಗಳು, ಗುರಿಗಳ ಕುರಿತು ಮಾತನಾಡಿದರು.
ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಕರ್ನಾಟಕ ಅಂತರ್ಗತ ಜೀವನೋಪಾಯ ಕಾರ್ಯಕ್ರಮ ಅಧಿಕಾರಿ ಮೇಡಂಲಿಸ್ಸಿ, ಎನ್ಆರ್ಎಲ್ಎಂ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್, ಎನ್ಎಆರ್ಐ-ಕೆಐಎಲ್ಪಿ ಜಿಲ್ಲಾ ಸಂಯೋಜಕ ವೀರಣ್ಣ.ಕೆ., ಕಂಪ್ಲಿಯ ಡಿಆರ್ಪಿ ದ್ರಾಕ್ಷಾಯಿಣಿ ಹಾಗೂ ಕುರುಗೋಡು ತಾಲ್ಲೂಕು ಸಂಯೋಜಕರು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 