2028ರೊಳಗೆ ರಾಷ್ಟ್ರೀಯ ಹೆದ್ದಾರಿ ಪೂರ್ಣ:ಪ್ರಿಯಾಂಕಾ ಜಾರಕಿಹೊಳಿ
National Highway to be completed by 2028: Priyanka Jarkiholi
ಅಥಣಿ 07 :- ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಷ್ಟೀಯ ಹೆದ್ದಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೂಚನೆ ನೀಡಿದರು.ಅವರು ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವಲಿಹಾಳ ಗ್ರಾಮದ ಹತ್ತಿರ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಅಧಿಕಾರಿಗಳ ತಂಡದೊಂದಿಗೆ ವೀಕ್ಷಿಸಿ ಮಾತನಾಡಿದರು.ಮುರಗುಂಡಿಯಿಂದ ಗೋಟುರವರೆಗಿನ ಕಾಮಗಾರಿಯಲ್ಲಿ ಅನೇಕ ತಾಂತ್ರಿಕ ಅಡಚನೆಗಳು ಉಂಟಾಗಿರುವದರಿಂದ ಕಾಮಗಾರಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗುತ್ತಿದ್ದು, ತಕ್ಷಣ ಈ ಆಡಚಣೆಗಳನ್ನು ಬಗೆಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡುವುದರ ಜೊತೆಗೆ ಅತಿ ಹೆಚ್ಚು ಉತ್ತಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆವೆ ಎಂದರು. ಇಂದು ಉಗಾರ,ಮುರಗುಂಡಿ.ಬಡಚಿ ಗ್ರಾಮಗಳಲ್ಲಿ 5 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಕ್ಷೇತ್ರರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿವೇಕ ಮಠ, ಶಿಕ್ಷಣಾಧಿಕಾರಿ ಎಂ. ಆರ್. ಮುಂಜೆ, ಕಾಂಗ್ರೆಸ್ ಧುರಿಣರಾದ ರಮೇಶ್ ಸಿಂದಗಿ, ಗಜಾನನ ಮಂಗಸೂಳಿ, ರಾವಸಾಹೇಬ್ ಐಹೊಳೆ, ಸುನಿತಾ ಐಹೊಳೆ, ರೇಖಾ ಪಾಟೀಲ , ಗುತ್ತಿಗೆದಾರರಾದ ಚಿದಾನಂದ ಹಣಮಾಪೂರ, ಈಶ್ವರ ಸನದಿ, ಸೇರಿದಂತೆ ಅನೇಕರು ಇದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 