ರಾಷ್ಟ್ರೀಯ ಗಣಿತ ದಿನಾಚರಣೆ
National Mathematics Day
ಹೂವಿನ ಹಡಗಲಿ 23: ಗಣಿತ ಎಲ್ಲಾ ವಿಜ್ಞಾನಗಳ ತಾಯಿ ಎಂದು ಮುಖ್ಯ ಗುರುಗಳಾದ ಸುರೇಶ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ತುಂಗಭದ್ರಾ ಅನುದಾನಿತ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದ ಪ್ರಸಿದ್ಧ ಗಣಿತಜ್ಞರಾದ ಆರ್ಯಭಟ ಭಾಸ್ಕರ ಶ್ರೀನಿವಾಸ ರಾಮಾನುಜನ್ ಗಣಿತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಜನ ಸಾಮಾನ್ಯರ ದೈನಂದಿನ ಬದುಕಿನಲ್ಲಿ ಗಣಿತ ಹಾಸು ಹೊಕ್ಕಾಗಿದೆ. ವ್ಯಾಪಾರ ವಹಿವಾಟು ಕೃಷಿ ವಾಣಿಜ್ಯ ಬ್ಯಾಂಕ್ ವೈದ್ಯಕೀಯ ಶಿಕ್ಷಣ ಮೊದಲಾದ ಎಲ್ಲಾ ಕ್ಷೇತ್ರಗಳಲ್ಲೂ ಗಣಿತ ಅವಶ್ಯವಾಗಿ ಬೇಕು ಎಂದು ತಿಳಿಸಿದರು.ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ದೈಹಿಕ ಶಿಕ್ಷಕ ಸ್ವಾಮಿನಾಥ ರಾಮಸ್ವಾಮಿ ಶಿಕ್ಷಕರಾದ ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಪ್ರತಿಮಾ ಎನ್ ಜಯಮ್ಮ ವೈ ಎಲ್ ಗಿಡ್ಡಾನಾಯ್ಕ್ ಸಂಗಮೇಶ ಸುಂಕದ ಪ್ರಸಾದ್ ಎಸ್ ಸಂತೋಷ್ ಕುಮಾರ್ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 