ಉತ್ತರ ಕನ್ನಡ ಜಿ.ಪಂ.ನಲ್ಲಿ ರಾಷ್ಟ್ರೀಯ ಪಂಚಾಯತ ರಾಜ್ ದಿನ ಆಚರಣೆ
National Panchayat Raj Day celebration in Uttara Kannada G.P
ಲೋಕದರ್ಶನ ವರದಿ
ಕಾರವಾರ 24 :- ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಂಚಾಯತ ರಾಜ್ ದಿನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಷ್ ಶಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ , ತೆರಿಗೆ ವಸೂಲಾತಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಿದ ತಾಲೂಕ ಪಂಚಾಯತ, ಪ್ರಸ್ತುತ ಬೇಡಿಕೆ ತೆರಿಗೆ ವಸೂಲಾತಿಯಲ್ಲಿ ಅತೀ ಹೆಚ್ಚು ಪ್ರಗತಿ ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಪಿಡಿಓ ಹಾಗೂ ಬಿಲ್ ಕಲೆಕ್ಟರ್ ಗೆ ಸನ್ಮಾನ, ಒಟ್ಟೂ ಬೇಡಿಕೆ ತೆರಿಗೆ ವಸೂಲಾತಿಯಲ್ಲಿ ಅತೀ ಹೆಚ್ಚು ಪ್ರಗತಿ ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕಾರ್ಯನಿರ್ವಾಹಕ ಅಧಿಕಾರಿ. ಪಿಡಿಓ ಹಾಗೂ ಬಿಲ್ ಕಲೆಕ್ಟರ್ ಗೆ ಸನ್ಮಾಗೆ,
ಮಹಿಳಾ ಸ್ನೇಹಿ ಉಪಕ್ರಮವನ್ನು ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯತ ಎನ್.ಆರ್.ಎಲ್.ಎಂ ಸ್ವ ಸಹಾಯ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿ, ಪಿಡಿಓಗೆ ಸನ್ಮಾನ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೆರವು ನೀಡಿದ ಸರ್ಕಾರೇತರ ಸಂಸ್ಥೆಗಳು/ನಾಗರಿಕಾ ಸೇವಾ ಸಂಘಗಳಿಗೆ ಪುರಸ್ಕಾರ, ಉತ್ತಮ ದಾಖಲೆ ನಿರ್ವಹಿಸಿದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಎಲ್ಲಾ ಶಾಖಾ ಮುಖ್ಯಸ್ಥರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 